KRS ಜಲಾಶಯದ ನೀರಿನ ಮಟ್ಟ 110 ಅಡಿಗೆ ಇಳಿಕೆ.

KRS ಜಲಾಶಯದ ನೀರಿನ ಮಟ್ಟ 110 ಅಡಿಗೆ ಇಳಿಕೆ.

ಕುಡಿಯುವ ನೀರಿನ ಬಗ್ಗೆ ಆತಂಕ; ಅಧಿಕಾರಿಗಳಿಂದ ಸ್ಪಷ್ಟನೆ.

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಇದೀಗ 110 ಅಡಿಗೆ ಇಳಿದಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 110.44 ಅಡಿ ನೀರು ಇದ್ದು, ಸುಮಾರು 32.167 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ ಈ ಬಾರಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಾ ಎಂಬ ಆತಂಕ ಶುರುವಾಗಿದೆ.

ಬೆಂಗಳೂರಿಗೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲಾ

ಸಾಮಾನ್ಯವಾಗಿ ಜೂನ್–ಜುಲೈ ತಿಂಗಳಲ್ಲಿ ತುಂಬುವ ಕೆಆರ್‌ಎಸ್ ಜಲಾಶಯ ಈ ಬಾರಿ ಉತ್ತಮ ಮಳೆಯ ಪರಿಣಾಮವಾಗಿ  ಮೇ ತಿಂಗಳಲ್ಲೇ ಭರ್ತಿಯಾಗಿತ್ತು. ಆದರೆ ಈಗ ನೀರಿನ ಮಟ್ಟ 110 ಅಡಿಗೆ ಇಳಿದಿರುವುದರಿಂದ ಮುಂದಿನ ದಿನಗಳಲ್ಲಿ ಕುಡಿಯಲು ನೀರು ಸಿಗದಂತೆ ಆಗುತ್ತಾ ಎಂಬ ಪ್ರಶ್ನೆ ಉದಭವಿಸಿದ್ದು, ನೀರಿನ ಮಟ್ಟ ಕುಸಿದಿದ್ದರೂ ಜೂನ್ ಹಾಗೂ ಜುಲೈವರೆಗೆ ಕುಡಿಯುವ ನೀರಿಗೆ ಯಾವುದೇ ಆತಂಕ ಇಲ್ಲ ಎಂದು ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ರೈತರ ಬೆಳೆಗಳಿಗೆ ಕಟ್ಟು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಬಿಡಲಾಗುತ್ತಿದ್ದು, ನೀರಿನ ಸಮರ್ಪಕ ನಿರ್ವಹಣೆ ಮಾಡಲಾಗುತ್ತಿದೆ. ಹೀಗಾಗಿ ಮೈಸೂರು ಹಾಗೂ ಬೆಂಗಳೂರಿಗೆ ಪೂರೈಕೆ ಮಾಡುವ ಕುಡಿಯುವ ನೀರಿಗೂ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಈ ವರ್ಷ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *