ಮಿಡಿಗೇಶಿ: ಇಲ್ಲಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲುಗಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಅನುಮಾನಕ್ಕೆ ಕಾರಣವಾಗಿದೆ.
ಜಮೀನು ಒಂದರಲ್ಲಿ ಆ.1 ರಂದು ರಾತ್ರಿ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು, ಆ.2 ರಂದು ಜಮೀನಿಗೆ ತೆರಳಿದ್ದ ಮಾಲೀಕರಿಗೆ ಜಮೀನಿನ ಅಲ್ಲಲ್ಲಿ ಸತ್ತು ಬಿದ್ದ ನವಿಲುಗಳನ್ನು ಕಂಡು ಸ್ಥಳೀಯ ಪೊಲೀಸರಿಗೂ ಹಾಗೂ ವಲಯದ ಅರಣ್ಯಾಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ತಾಲ್ಲೂಕು ಪಶು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಪರಿಶೀಲಿಸಿ 5 ಗಂಡು ಹಾಗೂ 14 ಹೆಣ್ಣು ನವಿಲುಗಳು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ನವಿಲುಗಳ ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಅರಣ್ಯಾಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಸತ್ತ ನವಿಲುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ವಿಧಿ ವಿಜ್ಞಾನ ಕೇಂದ್ರದಿAದ ವರದಿ ಬಂದ ನಂತರವಷ್ಟೇ 19 ನವಿಲುಗಳ ಸಾವಿಗೆ ಕಾರಣ ಏನೆಂಬುದು ಗೊತ್ತಾಗಲಿದೆ.
ಭಾನುವಾರ ನವಿಲುಗಳ ಸತ್ತ ಜಮೀನಗೆ ಅರಣ್ಯ ಇಲಾಖೆಯ ಎಸಿಎಫ್ ಮಲ್ಲಿಕಾರ್ಜುನ್, ವಲಯ ಅರಣ್ಯಾಧಿಕಾರಿ ಸುರೇಶ್, ಬೀಡ್ ಗಾರ್ಡ್ ಮಹೇಶ್ಕುಮಾರ್, ಉಪ ಅರಣ್ಯ ವಲಯಾಧಿಕಾರಿ ಮುತ್ತುರಾಜು ಭೇಟಿ ನೀಡಿದ್ದರು.
For More Updates Join our WhatsApp Group :