ತುಮಕೂರು: ಭಾರತ ದೇಶವು ಸ್ವಾತಂತ್ರ್ಯ ಪಡೆದು 78 ವರ್ಷಗಳು ಕಳೆದರೂ ಕೂಡ ಮಕ್ಕಳು ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಮಕ್ಕಳ ಕಳ್ಳ ಸಾಗಾಣಿಕೆ ಇಂತಹ ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಪುರಾತನ ಕಾಲದಿಂದಲೂ ಕೂಡ ಮಕ್ಕಳನ್ನು ವೇಶ್ಯಾವಾಟಿಕೆ, ಅಂಗಾAಗಗಳನ್ನು ಕಸಿದು, ಭಿಕ್ಷಾಟನೆಯಲ್ಲಿ ತೊಡಗಿಸಿಕೊಳ್ಳುವುದು, ಗುಲಾಮಗಿರಿಗೆ ಬಳಸಿಕೊಳ್ಳುವುದು, ಮಹಿಳೆಯರು ಮತ್ತು ಮಕ್ಕಳನ್ನು ಕಳ್ಳ ಸಾಗಾಣಿಕೆಗೆ ಒಳಗಾಗುತ್ತಿದ್ದಾರೆ.
ರಾಜ್ಯದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ 26436 ಬಾಲಗರ್ಭಿಣಿಯರು ಪತ್ತೆಯಾಗಿರುವ ಅಘಾತಕಾರಿ ಅಂಶವನ್ನು ಆರೋಗ್ಯ ಇಲಾಖೆ ಏಪ್ರಿಲ್-2024ರಿಂದ ಫೆಬ್ರವರಿ-2025ರ ಮಧ್ಯೆ ಸಂಗ್ರಹಿಸಿರುವ ದಾಖಲೆಗಳನ್ನು ಬಹಿರಂಗಪಡಿಸಿವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ. ತಿಪ್ಪೇಸ್ವಾಮಿ ವಿಷಾದಿಸಿದರು.
ನಗರದ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ “ವಿಶ್ವ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಹಾಗೂ ಬಾಲ್ಯವಿವಾಹ ನಿಷೇಧ” ಕುರಿತ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಬಾಲ್ಯವಿವಾಹದಂತಹ ಪ್ರಕರಣಗಳು ಹೆಚ್ಚಿನ ರೀತಿಯಲ್ಲಿ ಇರುವುದಕ್ಕೆ ಈ ಅಂಕಿಅAಶಗಳು ಸಾಕ್ಷಿಯಾಗಿವೆ. ಬಾಲಗರ್ಭಿಣಿಯರು ದೈಹಿಕವಾಗಿ ಸಧೃಢವಾಗಿರದ ಕಾರಣ ರಕ್ತಹೀನತೆಯಿಂದ ಹೆರಿಗೆ ಸಮಯದಲ್ಲಿ ಸಾವನ್ನಪ್ಪುತ್ತಿರುವುದು ಕೂಡ ಕಂಡುಬರುತ್ತಿವೆ. ಇದಕ್ಕೆಲ್ಲಾ ಬಾಲ್ಯವಿವಾಹವು ಮೂಲಕಾರಣವಾಗಿದೆ ಇದನ್ನು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ನಿರ್ಮೂಲನೆ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ ಆರ್.ಜಿ., ಇತ್ತೀಚಿನ ದಿನಗಳಲ್ಲಿ ಚಿಕ್ಕಚಿಕ್ಕ ಮಕ್ಕಳಿಗೆ ಬೇರೆ ಬೇರೆ ಆಮಿಷಗಳನ್ನೊಡ್ಡಿ ಮಕ್ಕಳನ್ನು ವಿವಿಧ ರೀತಿಯ ಕೃತ್ಯಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಪೋಕ್ಸೊ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದೆ. ಆದ್ದರಿಂದ ಇಲಾಖೆಯ ಜೊತೆಯಲ್ಲಿ ಪೋಷಕರು ಕೂಡ ಕೈಜೋಡಿಸಿದಾಗ ಮಾತ್ರ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪಕಾರ್ಯದರ್ಶಿ ಈಶ್ವರಪ್ಪ ಮಾತನಾಡಿ, ಕಿಶೋರಾವಸ್ಥೆಯ ಮಕ್ಕಳನ್ನು ಪೋಷಕರು ತಮ್ಮ ಕಣ್ಣುಗಳಂತೆ ಜೋಪಾನ ಮಾಡಿದಾಗ ಮಾತ್ರ ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.
ಅಲ್ಲದೇ ಪ್ರತಿಯೊಂದು ಗ್ರಾಮಪಂಚಾಯ್ತಿಗಳಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ರಚನೆಯಾಗಿರುತ್ತದೆ. ಗ್ರಾಮೀಣ ಭಾಗದಿಂದ ಇದನ್ನು ಪ್ರಾರಂಭ ಮಾಡಬೇಕು. ವಿವಿಧ ಭಾಗಗಳಿಂದ ವಲಸೆ ಬರುವ ಕುಟುಂಬಗಳನ್ನು ಕಾವಲು ಸಮಿತಿ ಸದಸ್ಯರು ಗುರುತಿಸಿ ಸಂಪೂರ್ಣ ವಿವರವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯರಾದ ನೂರುನ್ನಿಸಾ, ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಲೈಂಗಿಕ ಪ್ರಕರಣಗಳು ಮೊದಲು ತಮ್ಮ ಕುಟುಂಬದವರಿAದಲೇ ನಡೆಯುತ್ತಿರುವುದಾಗಿ ನ್ಯಾಯಾಲಯದ ಮುಂದೆ ದಾಖಲಾಗುತ್ತಿವೆ. ಒಂದೂವರೆ ವರ್ಷದಿಂದ ಹಿಡಿದು 18 ವರ್ಷದೊಳಗಿನ ಮಕ್ಕಳ ಮೇಲೆ ವಿವಿಧ ರೀತಿಯ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ. ಹೀಗಾಗಿ ಶಾಲೆಗಳಲ್ಲಿ ಮುಖ್ಯಶಿಕ್ಷಕರು ಪೋಷಕರ ಸಭೆಗಳಲ್ಲಿ ಪೋಷಕರಿಗೆ ಬಾಲ್ಯವಿವಾಹ ಮತ್ತು ಪೋಕ್ಸೊ ಕಾಯ್ದೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ತಾಲ್ಲೂಕಿನ ಪ್ರತಿಯೊಂದು ಸರ್ಕಾರಿ ಕಟ್ಟಡದ ಮೇಲೆ, ಶಾಲೆಯ ಗೋಡೆಯ ಮೇಲೆ ಮಕ್ಕಳ ಸಹಾಯವಾಣಿ-1098ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಬರೆಸಿರುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ರಕ್ಷಣಾಧಿಕಾರಿ (ಸಾಂಸ್ಥಿಕ ಸೇವೆ), ಕಾನೂನು ಪರಿವೀಕ್ಷಣಾಧಿಕಾರಿ, ಸಮಾಜ ಕಾರ್ಯಕರ್ತರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತುಮಕೂರು ಹಾಗೂ ಮಕ್ಕಳ ಸಹಾಯವಾಣಿ-1098ಯ ಸಿಬ್ಬಂದಿಗಳು, ತುಮಕೂರು ಇವರು ಹಾಜರಿದ್ದರು.