ತುಮಕೂರು || ಇಲಾಖೆ ಮಾಹಿತಿ ಸೋರಿಕೆ : ಐವರು ಪೊಲೀಸರ ಅಮಾನತು

ತುಮಕೂರು : ಕ್ರಿಮಿನಲ್‌ ಹಿನ್ನೆಲೆ ಯವರಿಗೆ ಪೊಲೀಸ್ ಇಲಾಖೆಯ ಮಾಹಿತಿ ಸೋರಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇರೆಗೆ ತುಮಕೂರು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕೆ.ವಿ.ಅಶೋಕ್ ಒಂದೇ ದಿನ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕ್ಯಾತಸಂದ್ರ ಠಾಣೆಯ ಸಿಬ್ಬಂದಿ ಮಂಜು, ಅಹೋಬಲ ನರಸಿಂಹಮೂರ್ತಿ, ಜಯನಗರ ಠಾಣೆ ಸಿಬ್ಬಂದಿ ಮನು ಎಸ್‌.ಗೌಡ, ಟ್ರಾಫಿಕ್ ಪೊಲೀಸ್ ಠಾಣೆ ರಾಮಕೃಷ್ಣ ಹಾಗೂ ಎಸ್‌ಪಿ ಕಚೇರಿಯ ಸುರೇಶ್ ಅಮಾನತುಗೊಂಡ ಸಿಬ್ಬಂದಿ. ಪತ್ರಿಕಾ ಸಂಪಾದಕರೊಬ್ಬರ ಹತ್ಯೆಗೆ ಸುಪಾರಿ ಕೊಟ್ಟು ಜೈಲು ಪಾಲಾಗಿರುವ ಆರೋಪಿಗಳಾದ ಮಂಜುನಾಥ್ ರೆಡ್ಡಿ, ನವೀನ್, ನರಸಿಂಹ ಮೂರ್ತಿಗೆ ಈ ಐವರು ಮಾಹಿತಿ ಸೋರಿಕೆ ಮಾಡುತ್ತಿದ್ದರು.

ಈ ಆರೋಪಿಗಳಿಗೆ ಠಾಣೆಯ ಪ್ರಕರಣಗಳ ಬಗ್ಗೆ ಮಾಹಿತಿ ನೀಡುತ್ತಿದ್ದರು. ಈ ಮೂವರು ಆರೋಪಿಗಳ ವಿರುದ್ಧ ದಂಡಿನಶಿವರ ಹಾಗೂ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೂವರ ವಿರುದ್ಧ ಕೊಲೆಗೆ ಸಂಚು, ಹಲ್ಲೆ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ವಾಟ್ಸ್ ಆ್ಯಪ್ ಮೂಲಕ ಆರೋಪಿಗಳಿಗೆ ಮಾಹಿತಿಯನ್ನು ರವಾನಿಸುತ್ತಿದ್ದರು. ಪ್ರಕರಣವೊಂದರಲ್ಲಿ ಮಂಜುನಾಥ್ ರೆಡ್ಡಿ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ

Leave a Reply

Your email address will not be published. Required fields are marked *