ತುಮಕೂರು || ಗಾಳಿ ಸಹಿತ ಮಳೆ : ಉರುಳಿದ ಮರ, ವಿದ್ಯುತ್ ಕಂಬ

ತುಮಕೂರು: ನಗರದಲ್ಲಿ ಗುರುವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಮರ, 4 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಯಾವುದೇ ಹಾನಿಯಾಗಿಲ್ಲ.

ವಿದ್ಯುತ್ ಕಂಬ ನೆಲಕ್ಕೆ ವಾಲಿದ ತಕ್ಷಣ ಫುಟ್ಪಾತ್ ವ್ಯಾಪಾರಿಗಳು ಅಲ್ಲಿಂದ ಓಡಿ ಹೋಗಿದ್ದಾರೆ. ಇದರಿಂದ ಅಪಾಯ ತಪ್ಪಿದೆ. ಕಂಬ, ಮರ ತೆರವುಗೊಳಿಸುವ ತನಕ ರೈಲು ನಿಲ್ದಾಣದ ರಸ್ತೆ ಬಂದ್ ಮಾಡಲಾಗಿತ್ತು.

ಎಲ್ಐಸಿ ಕಚೇರಿ ಕಡೆಗೆ ಹೋಗುವ ರಸ್ತೆಯಲ್ಲಿ 2 ಕಂಬ, ಪ್ರವಾಸಿ ಮಂದಿರದ ಪಕ್ಕದಲ್ಲಿದ್ದ 2 ವಿದ್ಯುತ್ ಕಂಬ ಧರೆಗುರುಳಿವೆ. ಮಹಾನಗರ ಪಾಲಿಕೆ ಅಧಿಕಾರಿಗಳು, ಪೊಲೀಸರು, ಬೆಸ್ಕಾಂ, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರ, ವಿದ್ಯುತ್ ಕಂಬ ತೆರವುಗೊಳಿಸಿದರು.

Leave a Reply

Your email address will not be published. Required fields are marked *