ದರ್ಶನ್ ಪರ ವಾದ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಿದ್ರಾ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಪರ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದು, ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಇನ್ನಷ್ಟು ಪ್ರಬಲವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ಅವರ ಪತ್ನಿ ವಿಜಯಲಕ್ಷ್ಮಿ ನೇಮಿಸಿದ್ದಾರೆ ಎಂದು ತಿಳಿದುಬಂದಿದೆ

ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೆಚ್ ​ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಲು ಕಾರಣರಾಗಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ

ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ತಂದೆ-ತಾಯಿಯ ಪರವಾಗಿ ದರ್ಶನ್ ಪರವಾಗಿ ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದರು. ಇದೀಗ ಸಿವಿ ನಾಗೇಶ್ ಅವರು ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರ ಬದಲಿಗೆ ವಾದ ಮಂಡಿಸುತ್ತಾರೆಯೇ ಅಥವಾ ಅನಿಲ್ ಬಾಬು, ರಂಗನಾಥ ರೆಡ್ಡಿ ಅವರುಗಳ ಜೊತೆಗೆ ಸಿವಿ ನಾಗೇಶ್ ಸಹ ವಾದ ಮಂಡಿಸುತ್ತಾರೆಯೇ ಕಾದು ನೋಡಬೇಕಿದೆ

Leave a Reply

Your email address will not be published. Required fields are marked *