ಇಡಿ ದಾಳಿ || ಸರ್ಕಾರ ಮಧ್ಯ ಪ್ರವೇಶಿಸಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು : ಮಾಜಿ ಸಚಿವ ನಾಗೇಂದ್ರ ಮನೆಯ ಮೇಲೆ ಇಡಿ ದಾಳಿ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಅವರ ಕೆಲಸವನ್ನ ಕಾನೂನು ಪ್ರಕಾರ ಮಾಡಲಿ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಇಂದು ಬೆಳಗ್ಗೆ ಮಾಜಿ ಸಚಿವ ನಾಗೇಂದ್ರ ಹಾಗೂ ಮತ್ತೊಬ್ಬ ಶಾಸಕನ ಮನೆಯ ಮೇಲೆ ಇಡಿ ರೇಡ್ ಆಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇಡಿ ಅವರ ಕೆಲಸ ಮಾಡಲಿ. ನಾವು ಮಧ್ಯ ಪ್ರವೇಶ ಮಾಡುವುದಿಲ್ಲ. ಆದರೆ, ಅವರು ಕಾನೂನು ಪ್ರಕಾರ ಕೆಲಸ ಮಾಡಲಿ ಎಂದು ಹೇಳಿದರು.

ಕ್ಯಾಬಿನೆಟ್​ನಲ್ಲಿ ಇಟ್ಟು ತೀರ್ಮಾನ : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾಯಿಸಿದೆ ಎಂದು ನಿನ್ನೆ ಡಿ. ಕೆ ಶಿವಕುಮಾರ್ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಆಗಮಿಸಿದರು. ಅವರು ರಾಮನಗರವನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಿ ಎಂಬ ಬಗ್ಗೆ ಮನವಿ ಸಲ್ಲಿಸಿದ್ದಾರೆ. ನಾನು ಇದನ್ನ ಕ್ಯಾಬಿನೆಟ್​ನಲ್ಲಿ ಇಟ್ಟು ತೀರ್ಮಾನ ಮಾಡುವುದಾಗಿ ಹೇಳಿದ್ದೇನೆ ಎಂದರು.

Leave a Reply

Your email address will not be published. Required fields are marked *