ಮೈಸೂರು || ದಲಿತ ಮಹಿಳೆ ಅನುಮಾನಾಸ್ಪದ ಸಾವು : ಅತ್ಯಾಚಾರದ ದೂರು

ಮೈಸೂರು: 38 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನಾಸ್ಪದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ರೈತರೊಬ್ಬರ ಬಾಳೆ ತೋಟದಲ್ಲಿ ಮೃತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಬಾಳೆ ತೋಟದ ಮಾಲೀಕ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ನಂಜನಗೂಡಿನ ಡಿವೈಎಸ್ಪಿ ರಘು, ಪಿಎಸ್‌ಐ ಲಕ್ಷ್ಮಿಕಾಂತ ಕೋಳಿ, ಚೇತನ್​ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ಪೊಲೀಸ್ ಠಾಣೆಯಲ್ಲಿ ಮೃತಳ ಸಹೋದರ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಅನ್ಯ ವರ್ಗದ ವ್ಯಕ್ತಿಯಿಂದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ದಲಿತ ಸಂಘಟನೆಯವರು ಆರೋಪ ಮಾಡಿದ್ದಾರೆ. ಈಗಾಗಲೇ ಮೃತ ಮಹಿಳೆಯ ಶವವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *