ನಟ ದರ್ಶನ್ ಮತ್ತೊಂದು ಬೇಡಿಕೆ ಈಡೇರಿಸಿದ ಬಳ್ಳಾರಿ ಜೈಲಧಿಕಾರಿಗಳು

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿ ಇದೀಗ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಮತ್ತೊಂದು ಬೇಡಿಕೆಯನ್ನು ಪೊಲೀಸರು ಈಡೇರಿಸಿದ್ದಾರೆ.

ದರ್ಶನ್ ಅವರು ಜೈಲಿನೊಳಗಿನ ಇಂಡಿಯನ್ ಟಾಯ್ಲೆಟ್ ನಲ್ಲಿ ನನಗೆ ಕೂರಲಾಗುವುದಿಲ್ಲವಾದ್ದರಿಂದ ಸರ್ಜಿಕಲ್ ಚೇರ್ ಒದಗಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಫೋನ್ ಕಾಲ್ ಮಾಡಲು ಅನುಮತಿ ನೀಡಬೇಕು ಎಂದು ಸಹ ಅವರು ಜೈಲಧಿಕಾರಿಗೆ ಮನವಿ ಮಾಡಿದ್ದರು. ಈ ಎರಡೂ ಮನವಿಗಳನ್ನು ಪುರಸ್ಕರಿಸಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ.

ಕಳೆದ ವಾರವಷ್ಟೇ ದರ್ಶನ್ ಅವರು ತನ್ನ ವಿರುದ್ಧ ಸಲ್ಲಿಸಲಾಗಿರುವ ಚಾರ್ಚ್ ಶೀಟ್ ನಲ್ಲಿ ಏನಿದೆ ಎಂಬುದನ್ನು ಅರಿಯಲು ಮತ್ತು ಹೊರ ಜಗತ್ತಿನಲ್ಲಿ ಏನು ನಡೆಯುತ್ತದೆ ಎಂಬುದನ್ನು ತಿಳಿಯುವ ಸಲುವಾಗಿ ತನಗೆ ಟಿವಿ ಒದಗಿಸಿಕೊಡುವಂತೆ ಜೈಲಧಿಕಾರಿಗಳು ಮನವಿ ಮಾಡಿದ್ದರು. ಅದರಂತೆ ಇದೀಗ 32 ಇಂಚಿನ ಟಿವಿಯಲ್ಲಿ ದರ್ಶನ್ ಅವರನ್ನು ಬಂಧಿಯಾಗಿರಿಸಿರುವ ಸೆಲ್ ನಲ್ಲಿ ಅಳವಡಿಸಲಾಗಿದೆ. ಜೈಲಿನ ನಿಯಮಾವಳಿಯ ಪ್ರಕಾರ ಖೈದಿಗಳಿಗೆ ಅವರ ಮನವಿಯ ಆಧಾರದ ಮೇಲೆ ಟಿವಿ ಅಳವಡಿಸುವ ವ್ಯವಸ್ಥೆ ಇದೆ. ಆದರೆ ಟಿವಿ ರಿಪೇರಿಯಾಗಬೇಕಿದ್ದರಿಂದ ಅಳವಡಿಸಲು ವಿಳಂಬವಾಗಿದೆ ಎಂದು ಜೈಲಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *