ಮೈಸೂರು ದಸರಾ ಉದ್ಘಾಟಕರಾಗಿ  ಸಾಹಿತಿ ಹಂಪ ನಾಗರಾಜಯ್ಯ ಆಯ್ಕೆ

ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಹಂಪ ನಾಗರಾಜಯ್ಯ ಆಯ್ಕೆ

ಮೈಸೂರು : ಇನ್ನೇನು ಮೈಸೂರು ದಸರಾ ಬಂತು. ಅ. ೩ ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಟiಜe . ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಬಂಗಾರದ ಅಂಬಾರಿ ಹೋರಲು ಅಭಿಮನ್ಯು ಕೂಡ ಸಜ್ಜಾಗಿದ್ದಾನೆ.

ಇದರ ಬೆನ್ನಲ್ಲೆ ದಸರಾ ಮಹೋತ್ಸವ ಉದ್ಘಾಟಕರಾಗಿ ಸಾಹಿತಿ ಹಂಪ ನಾಗರಾಜಯ್ಯ ನವರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ  ಅವರ ಹೆಸರನ್ನ ಘೋಷಣೆ ಮಾಡಲಾಗಿದೆ.

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಬಾರಿಯ ದಸರಾ ಉದ್ಘಾಟಕರಾಗಿ ಸಾಹಿತಿ ಹಂಪ ನಾಗಾರಾಜಯ್ಯ ಹೆಸರನ್ನ ಘೋಷಣೆ ಮಾಡಿದರು.ಅಕ್ಟೋಬರ್ ೩ ರಿಂದ ಅ.೧೨ ರವರೆಗೆ ಮೈಸೂರು ದಸರಾ ನಡೆಯಲಿದೆ. ಅ. ೩ ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದ್ದು ಉದ್ಘಾಟಕರಾಗಿ ಸಾಹಿತಿ ಹಂಪ ನಾಗಾರಾಜಯ್ಯ ಆಯ್ಕೆಯಾಗಿದ್ದಾರೆ

Leave a Reply

Your email address will not be published. Required fields are marked *