ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ರಾಜಭವನದಲ್ಲಿ ಷಡ್ಯಂತ್ರ

ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ರಾಜಭವನದಲ್ಲಿ ಷಡ್ಯಂತ್ರ

ಬೆOಗಳೂರು, ಸೆ,23; ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಪ್ರಮುಖ ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ ಅವರ ಪ್ರಕರಣದಲ್ಲಿ ವಿವರಣೆ ಕೋರಿ ನೋಟಿಸ್ ನೀಡಿದೆ. ಪ್ರಿಯಾಂಕ್ ಖರ್ಗೆ ಮೂಲಕ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ರಾಜಭವನದಲ್ಲಿ ಭಾರೀ ಷಡ್ಯಂತ್ರ÷್ಯ ನಡೆಯುತ್ತಿರುವುದು ಕಂಡು ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು, ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಈ ಕುರಿತಂತೆಯೂ ವಿವರ ಒದಗಿಸಬೇಕು ಎಂದು ರಾಜಭವನ ಬಯಸಿದೆ. ರಾಜಭವನ ಇದೀಗ ಪರ್ಯಾಯ ಆಡಳಿತ ಕೇಂದ್ರವಾಗಿದ್ದು, ಈ ಬೆಳವಣಿಗೆಗಳು ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವ ಆತಂಕ ಉಂಟು ಮಾಡಿವೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹಗರಣಕ್ಕೆ ಸಂಬOಧಿಸಿದOತೆ ಪೂರ್ಣ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಅವರು ಪತ್ರ ಬರೆದಿದ್ದಾರೆ. ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಬಗ್ಗೆಯೂ ವಿವರ ಕೋರಿದ್ದು, ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ಹಗರಣಕ್ಕೆ ಸಂಬOಧಿಸಿದOತೆ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಆಗಸ್ಟ್ 27ರಂದು ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆ ಸಮೇತ ದೂರು ನೀಡಿದ್ದರು.  ಸಚಿವರಿಬ್ಬರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದರು. ಛಲವಾದಿ ನಾರಾಯಣ ಸ್ವಾಮಿ ಮಲ್ಲಿಕಾರ್ಜುನ ಖರ್ಗೆ ಅವರ ಗರಡಿಯಲ್ಲಿ ಬೆಳೆದವರು. ಹೀಗಾಗಿ ಈ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇದಕ್ಕೂ ಮುನ್ನ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ, ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿದ್ದರು. ಈ ದೂರುಗಳನ್ನು ರಾಜಭವನ ಪರಿಶೀಲಿಸಿ, ಕಾನೂನು ಸಲಹೆ ಪಡೆದ ನಂತರ ಸರ್ಕಾರದಿಂದ ವಿವರಣೆ ಕೋರಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ. ಕೈಗಾರಿಕಾ ಸಚಿವರೂ ಆಗಿರುವ ಎಂ.ಬಿ.ಪಾಟೀಲ್, ಕೆಐಎಡಿಬಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದಾರೆ, ಮೂಲೆ ಹಾಗೂ ಬಿಡಿ ನಿವೇಶನಗಳನ್ನು ಹರಾಜು ಪ್ರಕ್ರಿಯೆ ಮೂಲಕ ಹಂಚಬೇಕು.

ಈ ಎಲ್ಲಾ ಪ್ರಕ್ರಿಯೆಗಳು ಆನ್‌ಲೈನ್‌ನಲ್ಲೇ ನಡೆಯಬೇಕು, ಆದರೆ, ಇವರು ಎಲ್ಲಾ ಕಾನೂನನ್ನು ಗಾಳಿಗೆ ತೂರಿ, ತಮ್ಮ ಆಪ್ತರು ಹಾಗೂ ರಾಜಕಾರಣಿಗಳ ಮಕ್ಕಳಿಗೆ ಹಂಚಿದ್ದಾರೆ ಎಂದು ಕೆಲವು ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು. ಈ ಅಕ್ರಮದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ, ಇದರಿಂದ ಕೆಐಎಡಿಬಿಗೆ ಕೋಟ್ಯಂತರ ರೂ. ನಷ್ಟ ಉಂಟಾಗಿದೆ ಎಂದು ದೂರಿದ್ದರು. ಇವರು ಕ್ರಿಮಿನಲ್ ಅಪರಾಧ ಎಸಗಿದ್ದಾರೆ, ಆದ್ದರಿಂದ ಭ್ರಷ್ಟಚಾರ ನಿಗ್ರಹ ಕಾಯಿದೆ ಸೆಕ್ಷನ್ 17 ಮತ್ತು 19ರಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಜಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು, ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡು ತಮ್ಮ ಕುಟುಂಬದ ಸಂಸ್ಥೆಗೆ ಬೆಲೆ ಬಾಳುವ ಜಮೀನು ಕೊಡಿಸಿದ್ದಾರೆ ಎಂದು ನಾರಾಯಣಸ್ವಾಮಿ ದೂರಿದ್ದರು.

ಸಿಎ ಸೈಟು ಪಡೆಯಲು ಕಾನೂನು ಕ್ರಮಗಳಿವೆ: ಸಾಮಾಜಿಕ ಚಟುವಟಿಕೆ, ರಂಗಮOದಿರ, ಆಸ್ಪತ್ರೆ ಸೇರಿದಂತೆ ನಿಗದಿತ ಉದ್ದೇಶಕ್ಕೆ ಇವನ್ನು ಮೀಸಲಾಗಿ ಇಡಲಾಗುತ್ತದೆ. ಸಾಮಾನ್ಯ ಜನರು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿ ಪ್ರಭಾವಿಗಳಿಗೆ ಹಂಚಿಕೆ ಮಾಡಲಾಗಿದೆ, ಇದರಿಂದ ಅನುಮಾನಗಳು ಸೃಷ್ಟಿಯಾಗಿವೆ. ಏರೋಸ್ಪೇಸ್ ನಿವೇಶನ ಪಡೆದಿದ್ದಾರೆ: ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ ಟ್ರಸ್ಟ್ ಕಲಬುರಗಿಯಲ್ಲಿ ನೋಂದಣಿಯಾಗಿದೆ, ಇದೊಂದು ಧಾರ್ಮಿಕ ಟ್ರಸ್ಟ್, ಆದರೆ ಇದಕ್ಕೆ ಏರೋಸ್ಪೇಸ್‌ಗೆ ಸಂಬOಧಿಸಿದ ನಿವೇಶನ ಪಡೆದಿದ್ದಾರೆ ಎಂದು ದೂರು ದಾಖಲಿಸಿದ್ದರು. ಇದಕ್ಕೆ ಸಂಬOಧಿಸಿದOತೆ ಉಭಯ ಸಚಿವರುಗಳು ಸುದ್ದಿಗೋಷ್ಠಿಯಲ್ಲಿ ಪ್ರತ್ಯೇಕವಾಗಿ ವಿವರಣೆ ನೀಡಿ, ಬಿಜೆಪಿ ಆರೋಪಗಳನ್ನು ತಳ್ಳಿಹಾಕಿದ್ದಲ್ಲದೆ, ನಿಯಮಾನುಸಾರವೇ ಅರ್ಹರಿಗೆ ನಿವೇಶನಗಳನ್ನು ನೀಡಲಾಗಿದೆ ಹಾಗೂ ಸಂಸ್ಥೆ ಪಡೆದುಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದರು.

Leave a Reply

Your email address will not be published. Required fields are marked *