ತುಮಕೂರು : ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಪಿ.ಯು.ಸಿ ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ), ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
Related Posts
ಕನ್ನಡಿಗರಿಗೆ ಮೀಸಲಾತಿ : Phonepe ಬಾಯ್ಕಾಟ್ ಅಭಿಯಾನ
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ರ್ಕಲ್ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಕಾಯ್ದೆ ಜಾರಿ…
ಹೊಸ ಕಾನೂನಿನಡಿ ಸರಿಯಾಗಿ ತಿಳಿದುಕೊಂಡು ಪ್ರಕರಣ ದಾಖಲಿಸಿ : ಆಯುಕ್ತರ ಸೂಚನೆ
ಬೆಂಗಳೂರು: ಜುಲೈ 1ರಿಂದ ದೇಶದಲ್ಲಿ ಮೂರು ಹೊಸ ಕಾನೂನುಗಳು ಅನುಷ್ಠಾನಗೊಂಡಿವೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ (ಬಿಎನ್ಎಸ್) ಪ್ರಕರಣಗಳು ದಾಖಲಾಗುತ್ತಿವೆ. ಹೊಸ ಕಾನೂನು ಆಗಿರುವುದರಿಂದ ಸೂಕ್ತ ತರಬೇತಿ…
ಮಹಿಳಾ ಪ್ರಗತಿ || ಹೆಣ್ಣು ಮಕ್ಕಳೇ ಕೀಳಿರಿಮೆ ಇಂದ ಹೊರ ಬನ್ನಿ
ಲೇಖನ : ಅಶ್ವಿನಿ ಸಂಜೆಸೂರ್ಯ, ತುಮಕೂರು ಶಾಲೆಯಲ್ಲಿ ಹಲ್ಲಿಗೆ ಕ್ಲಿಪ್ ಹಾಕಿಸಿಕೊಂಡ ಹುಡುಗಿಯೊಬ್ಬಳು ನಗುವಾಗಲೆಲ್ಲಾ ಪದೇ ಪದೇ ಅಂಗೈಯನ್ನು ಅಡ್ಡ ಹಿಡಿದುಕೊಳ್ಳುತ್ತಿದ್ದಳು.ಅವಳ ವರ್ತನೆ ಗುಂಪಿನಲ್ಲಿ ತೀರಾ ವಿಚಿತ್ರವಾಗಿ…