ನಟ ದರ್ಶನ್‌ನ ಬಳ್ಳಾರಿಯಿಂದ ಬೆಂಗಳೂರಿಗೆ ಕರೆತರಲು ಹೆಲಿಕಾಪ್ಟರ್ ಬುಕ್?

ನಟ ದರ್ಶನ್ನ ಬಳ್ಳಾರಿಯಿಂದ ಬೆಂಗಳೂರಿಗೆ ಕರೆತರಲು ಹೆಲಿಕಾಪ್ಟರ್ ಬುಕ್?

ಸ್ಯಾಂಡಲ್‌ವುಡ್ ನಟ ದರ್ಶನ್ ಜೈಲು ಸೇರಿ 3 ತಿಂಗಳು ಕಳೆದಿದೆ. ಬಾಸ್ ಯಾವಾಗ ಬರ್ತಾರೆ ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ. ಈಗಾಗಲೇ ಜಾಮೀನು ಪಡೆಯಲು ವಕೀಲರ ಮೂಲಕ ದರ್ಶನ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಮೂವರಿಗೆ ಜಾಮೀನು ಸಿಕ್ಕಿದೆ.

ಶೀಘ್ರದಲ್ಲೇ ನಟ ದರ್ಶನ್‌ಗೆ ಜಾಮೀನು ಸಿಗುತ್ತದೆ ಎನ್ನುವ ನಿರೀಕ್ಷೆ ಕೆಲವರಲ್ಲಿದೆ. ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 27ಕ್ಕೆ ಮುಂದೂಡಲಾಗಿದೆ. ಅದು ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ ಕಂಡಿತ ಸಿಗುತ್ತದೆ ಎಂದು ಎನ್ನಲಾಗ್ತಿದೆ. ವಕೀಲರು ಕೂಡ ಇದೇ ಭರವಸೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅಭಿಮಾನಿಗಳ ಸಂಭ್ರಮ ಹೆಚ್ಚಾಗಿದೆ. ಇದೆಲ್ಲದರ ನಡುವೆ ಬಳ್ಳಾರಿ ಜೈಲಿನಿಂದ ದರ್ಶನ್ ಬೆಂಗಳೂರಿಗೆ ಯಾವ ಮಾರ್ಗದಲ್ಲಿ ಬರ್ತಾರೆ? ಎನ್ನುವ ಬಗ್ಗೆ ಬಿಸಿಬಿಸಿ ಚರ್ಚೆ ಆಗ್ತಿದೆ.

ಹೆಲಿಕಾಪ್ಟರ್ ಮೂಲಕ ದರ್ಶನ್ ಬಳ್ಳಾರಿಯಿಂದ ಬೆಂಗಳೂರಿಗೆ ಬರ್ತಾರೆ, ಈಗಾಗಲೇ ಹೆಲಿಕಾಪ್ಟರ್ ಬುಕ್ ಮಾಡುವ ಪ್ರಯತ್ನ ಶುರುವಾಗಿದೆ. ಅದಕ್ಕಾಗಿ ಅನುಮತಿ ಪಡೆದು ಕೊಳ್ಳುವ ಕೆಲಸ ಆರಂಭವಾಗಿದೆ ಎಂದು ವರದಿಯಾಗಿದೆ. ದರ್ಶನ್ ಯಾವುದೇ ತಪ್ಪು ಮಾಡಿಲ್ಲ. ಅವರು ಖಂಡಿತ ಬಿಡುಗಡೆ ಆಗಿ ಬರ್ತಾರೆ. ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಆರ್‌ಆರ್‌ ನಗರದ ಮನೆ ತಲುಪಲು ಒಂದಿಡಿ ದಿನ ಬೇಕು ಎಂದು ಕೆಲ ದಿನಗಳ ಹಿಂದೆ ದರ್ಶನ್ ಆಪ್ತ ಮಹೇಶ್ ಹೇಳಿದ್ದರು.

Leave a Reply

Your email address will not be published. Required fields are marked *