ಇಂದಾದ್ರೂ ಕೊಲೆ ಆರೋಪಿ ನಟ ದರ್ಶನ್ ಅಭಿಮಾನಿಗಳ ‘ಆ’ ಕನಸು ನನಸಾಗಲಿದ್ಯಾ?

ರೇಣುಕಾಸ್ವಾಮಿ ಮಗನನ್ನು ದತ್ತು ತೆಗೆದುಕೊಳ್ಳಲು ಮುಂದಾದ ದರ್ಶನ್ ತೂಗುದೀಪ್...

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇನ್ನು ಇಂದು (ಅಕ್ಟೋಬರ್ 08) ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾದರೆ ಇಂದಾದ್ರೂ ದರ್ಶನ್ಗೆ ಬೇಲ್ ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಮತ್ತೊಂದೆಡೆ ಆಪ್ತರ ಆ ಕನಸ್ಸು ನನಸಾಗಲಿದೆಯಾ ಎನ್ನುವುದೇ ಪ್ರಶ್ನೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಹೊತರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಪತಿ ದರ್ಶನ್ಗಾಗಿ ವಿಜಯಲಕ್ಷ್ಮಿ ಅವರು ದೇವಾಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ವ್ರತಗಳನ್ನು ಮಾಡುತ್ತಿದ್ದಾರೆ. ಮತ್ತೊಂದೆಡೆ ಅಭಿಮಾನಿಗಳು ಕೂಡ ದೇವಸ್ಥಾನಗಳಲ್ಲಿ ವಿಶೇಚ ಪೂಜೆಗಳನ್ನು ಮಾಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಅಂಧಾಭಿಮಾನಿಗಳ ಅಟ್ಟಹಾಸ ಮುಂದುವರೆದಿದೆ

Leave a Reply

Your email address will not be published. Required fields are marked *