ಹೊಸ ಹೀರೋ ಜೊತೆ ಸಿಂಪಲ್ ಸುನಿ ಸಿನಿಮಾ ಘೋಷಣೆ

ಹೊಸ ಹೀರೋ ಜೊತೆ ಸಿಂಪಲ್ ಸುನಿ ಸಿನಿಮಾ ಘೋಷಣೆ

ಸಿನಿಮಾ ಪ್ರೇಮಿಗಳ ನಾಡಿಮಿಡಿತ ಅರಿತಿರುವ ಹಾಗೂ ನಮ್ಮ ನಡುವೆ ನಡೆಯುವ ಘಟನೆಯನ್ನು ನಿರ್ಮಾಪಕರಿಗೆ ಹೊರೆಯಾಗದೇ, ದೃಶ್ಯ ರೂಪಕ್ಕೆ ಇಳಿಸುವ ನಿರ್ದೇಶಕರಲ್ಲಿ ನಿಸ್ಸೀಮರಾದ ಸಿಂಪಲ್ ಸುನಿ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಆಶೀರ್ವಾದದೊಂದಿಗೆ ‘ದೇವರು ರುಜು ಮಾಡಿದನು’ ಎಂಬ ರಸವತ್ತಾದ ಪದ್ಯದ ಸಾಲನ್ನು ತಮ್ಮ ಮುಂದಿನ ಚಿತ್ರದ ಶೀರ್ಷಿಕೆಯಾಗಿಸಿದ್ದಾರೆ. ಇದರ ಮೂಲಕ ಬೆಳ್ಳಿ ಪರದೆಗೆ ಹೊಸ ನಾಯಕನನ್ನು ಪರಿಚಯಿಸಿದ್ದಾರೆ. ರಂಗಭೂಮಿ ಕಲಾವಿದ, ಅಪಾರ ಸಿನಿಮಾ ಪ್ರೀತಿ ಹೊಂದಿರುವ ವಿರಾಜ್ ಹೀರೋ ಆಗಿ ಸ್ಯಾಂಡಲ್ವುಡ್ಗೆ ಅಡಿ ಇಡುತ್ತಿದ್ದಾರೆ. ಕೈಯಲ್ಲಿ ಗಿಟಾರ್ ಹಿಡಿದು, ರಕ್ತಸಿಕ್ತರಾಗಿ ಕಾಣಿಸಿಕೊಂಡಿರುವ ವಿರಾಜ್ಗೆ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸುನಿ ಅವರ ಕಥನ, ವಚನ, ರಚನೆ ಹಾಗೂ ನಿರ್ದೇಶನ ಈ ಚಿತ್ರಕ್ಕಿದೆ.

ಪುಟ್ಟದೊಂದು ಝಲಕ್ ಮೂಲಕ ಹೀರೋ ಹಾಗೂ ಟೈಟಲ್ ರಿವೀಲ್ ಮಾಡಲಾಗಿದೆ. ಈಗಾಗಲೇ ನಾಯಕ ವಿರಾಜ್ ಚಿತ್ರದ ಟೀಸರ್ ಚಿತ್ರೀಕರಣ ಮಾಡಲಾಗಿದೆ. ರಕ್ತಚರಿತ್ರೆ ಜೊತೆಗೆ ಸಂಗೀತದ ಕಥೆಯನ್ನು ದೇವರು ರುಜು ಮಾಡಿದನು ಸಿನಿಮಾ ಮೂಲಕ ಸುನಿ ತೆರೆಯಲ್ಲಿ ಅನಾವರಣ ಮಾಡಲು ಹೊರಟಿದ್ದಾರೆ.

Leave a Reply

Your email address will not be published. Required fields are marked *