ಟಿ.ಎನ್.ಮಧುಕರ್ ಅವರಿಗೆ ಅಭಿನಂದನಾ ಸಮಾರಂಭ ನಾಳೆ

ಟಿ.ಎನ್.ಮಧುಕರ್ ಅವರಿಗೆ ಅಭಿನಂದನಾ ಸಮಾರಂಭ ನಾಳೆ

ತುಮಕೂರು: ಹಿಂದುಳಿದ ವರ್ಗಗಳ ಒಕ್ಕೂಟ, ತುಮಕೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನೂತನ ಅಧ್ಯಕ್ಷರಾದ ಒಕ್ಕೂಟದ ಗೌರವಾಧ್ಯಕ್ಷರಾದ ಟಿ.ಎನ್.ಮಧುಕರ್ ಅವರಿಗೆ ಅ.19 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ನಗರದ ಅಮಾನಿಕೆರೆ ಎದುರಿನ ಕನ್ನಡ ಭವನದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ದಿವ್ಯ ಸಾನಿಧ್ಯವನ್ನು ಹಿರೇಮಠಾಧ್ಯಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ನೆರವೇರಿಸುವರು.

ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಧನಿಯಾಕುಮಾರ್ ವಹಿಸುವರು. ಜಾತ್ಯಾತೀತ ಮಾನವ ವೇದಿಕೆ ಅಧ್ಯಕ್ಷರಾದ ಟಿ.ಆರ್.ಆಂಜನಪ್ಪ ಅಭಿನಂದನಾ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಪ್ರಜಾಪ್ರಗತಿ ಸಂಪಾದಕರಾದ ಎಸ್.ನಾಗಣ್ಣ, ಕಸಾಪ ಜಿಲ್ಲಾಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಜಿ.ಎಂ.ಸಣ್ಣಮುದ್ದಯ್ಯ, ರಾಜ್ಯ ಚೆಸ್ ಅಸೋಸಿಯೇಷನ್‌ನ ಮಂಜುನಾಥ್ ಜೈನ್, ಅಂತಾರಾಷ್ಟ್ರೀಯ ಚೆಸ್ ತರಬೇತುದಾರರಾದ ಮಾಧುರಿ ಮಂಜುನಾಥ್ ಜೈನ್ , ಸ್ವಾಮಿ ವಿವೇಕಾನಂದ ಸಹಕಾರ ಸಂಘದ ಅಧ್ಯಕ್ಷರಾದ ಪಿ.ಮೂರ್ತಿ, ಹಿಂದುಳಿದ ವರ್ಗಗಳ ಒಕ್ಕೂಟದ ಖಜಾಂಚಿ ಎಂ.ಕೆ.ವೆಂಕಟಸ್ವಾಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಹಾಗೂ ವಿಶೇಷ ಆಹ್ವಾನಿತರಾಗಿ ಕಲಾಶ್ರೀ ಡಾ.ಲಕ್ಷ್ಮಣದಾಸ್, ಕಾಳಿದಾಸ ವಿದ್ಯಾವರ್ದಕ ಸಂಘದ ಅಧ್ಯಕ್ಷ ಮೈಲಪ್ಪ, ವಿಶ್ವಕರ್ಮ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಕೆ.ವಿ.ಕೃಷ್ಣಮೂರ್ತಿ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಲಕ್ಷ್ಮಣ್, ಪಾಲಿಕೆ ಮಾಜಿ ಉಪಮೇಯರ್ ನರಸಿಂಹಮೂರ್ತಿ, ಆರ್ಯ ಈಡಿಗ ಸಮಾಜದ ಮುಖಂಡ ಮಲ್ಲಸಂದ್ರ ಶಿವಣ್ಣ ಅವರುಗಳು ಆಗಮಿಸುವರು ಎಂದು ಒಕ್ಕೂಟದ ಉಪಾಧ್ಯಕ್ಷ ಡಿ.ಎಂ.ಸತೀಶ್ ಹಾಗೂ ಪ್ರಧಾನಕಾರ್ಯದರ್ಶಿ ಹೆಬ್ಬೂರು ಶ್ರೀನಿವಾಸಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *