ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಮಧ್ಯಪ್ರದೇಶ ಮೂಲದ ಬಿಜೆಪಿ ನಾಯಕರನ್ನು ನೇಮಕ ಮಾಡಿದ್ದು ಇದಕ್ಕೆ ರಾಷ್ಟ್ರಪತಿಗಳು ಅಂಕಿತ ನೀಡಿದ್ದಾರೆ.
![](http://pragatitv.in/wp-content/uploads/2021/06/jee-chara-1024x576.jpg)
ಹೌದು,, ದೇಶದ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಅದೇ ರೀತಿಯಾಗಿ ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೊಟ್ ಅವರನ್ನು ನೇಮಕ ಮಾಡಲಾಗಿದೆ.
![](http://pragatitv.in/wp-content/uploads/2021/04/jeeva-web-new-1024x576.jpg)
ಮಧ್ಯಪ್ರದೇಶ ಮೂಲದವರಾದ ಅವರು ಮಾಜಿ ಕೇಂದ್ರ ಸಚಿವರಾಗಿದ್ದರು, ಮಧ್ಯಪ್ರದೇಶದ ಪ್ರಭಾವಿ ಬಿಜೆಪಿ ನಾಯಕರಾಗಿ ಗುರುತಿಸಿಕೊಂಡಿದ್ದ ಇವರನ್ನು ಇದೀಗ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
![](http://pragatitv.in/wp-content/uploads/2021/04/Jeeni-web-ad-d-1024x576.jpg)
ಹಾಲಿ ರಾಜ್ಯದ ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಅವರ ಸ್ಥಾನಕ್ಕೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.
Pragati TV Social Connect for more latest u