ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆಯಾದ ಮೇಲೆ ಸಾಕಷ್ಟು ಆಸಮಧಾನ ಇವತ್ತಿನವರೆಗೂ ಬಿಜೆಪಿ ಹಿರಿಯ ನಾಯಕರಿಂದ ವ್ಯಕ್ತವಾಗುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ವಿಜಯೇಂದ್ರ ಕುರಿತು ಮಾತನಾಡಿ ಉಪಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆಯಲು ವಿಜಯೇಂದ್ರ ಯಾರು? ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಇರೋವರ್ಗು ಯಾವುದೇ ಪ್ರಚಾರಕ್ಕೆ ಹೋಗಲ್ಲ ಎಂದು ಹೇಳಿಕೆ ನೀಡಿದ್ದಾರೆ. ಅವನ ಮುಖ ನೋಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಆದರೆ ಯಾವುದೇ ಪ್ರಚಾರಕ್ಕೆ ಹೋಗುವುದಿಲ್ಲ ಹೈಕಮಾಂಡ್ ಹೋಗು ಎಂದರೆ ಹೋಗುತ್ತೇನೆ ಈವರೆಗೆ ನನ್ನನ್ನು ಯಾರು ಕರೆದಿಲ್ಲ ಹೋಗಲೇಬೇಕು ಎಂದು ಸೂಚಿಸಿದರೆ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದರು.
ವಿಜಯೇಂದ್ರ ಮುಖ ನೋಡುವುದಿಲ್ಲ ,ಸಿಡಿದೆದ್ದ ರಮೇಶ್ ಜಾರಕಿಹೊಳಿ?
