ಶಿವಮೊಗ್ಗ : ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ 5 ಕೆಜಿ ಗಾಂಜಾವನ್ನ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆಗರದಹಳ್ಳಿ ಕ್ಯಾಂಪ್ ನಲ್ಲಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದಾಳಿ ನಡೆಸಿದಾಗ ಕ್ಯಾಂಪ್ನ ನಿವಾಸಿ ಸಂಜಿವ ರಾಜು ಹಾಗೂ ಭದ್ರಾವತಿ ತಾಲೂಕು ಸಿದ್ದರ ಕಾಲೋನಿಯ ಗುರುಪ್ರಸಾದ್ ಎಂಬವರನ್ನು ವಶಕ್ಕೆ ಪಡೆದ ವಿಚಾರಿಸಿದಾಗ ಇವರ ಬಳಿ ಒಣ ಗಾಂಜಾ ಪತ್ತೆಯಾಗಿದೆ ಎನ್ನಲಾಗಿದೆ. ಈ ಒಣ ಗಾಂಜಾವು ರೂ 2.80 ಲಕ್ಷದ ಮೌಲ್ಯದು ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಪೊಲೀಸರ ಕಾರ್ಯಾಚರಣೆಯಿಂದ 5 ಕೆಜಿ ಗಾಂಜಾ ವಶ
