ನಬಾರ್ಡ್ ಸಾಲ ಕಡಿತ, ರೈತರಿಗೆ ಆಘಾತ!

ತುಮಕೂರು || ತೆಂಗು ಬೆಳೆಗಾರರೇ ಗಮನಿಸಿ, ಬೆಳೆ ವಿಮಾ ಯೋಜನೆ

ನಬಾರ್ಡ್ನ ಸಾಲ ಕಡಿತದಿಂದ ಕರ್ನಾಟಕದ ರೈತರಿಗೆ ಆಘಾತ ಉಂಟಾಗಿದೆ. ಸಹಕಾರಿ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಕೊಡುತ್ತಿರುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿರುವುದರಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗುತ್ತದೆ ಹೀಗಾಗಿ ಈ ಹಿಂದೆ ನೀಡುತ್ತಿದ್ದಷ್ಟೇ ಸಾಲ ಕೊಡಬೇಕು ಎಂದು ಸಚಿವ ಶಿವಾನಂದ ಪಾಟೀಲ್ ಆಗ್ರಹಿಸಿದ್ದಾರೆ. ನಬಾರ್ಡ್ ಕೊಡುವ ರಿಯಾಯಿತಿ ಬಡ್ಡಿ ದರದ ಸಾಲದ ಮೊತ್ತದಿಂದಲೇ ಡಿಸಿಸಿ ಬ್ಯಾಂಕುಗಳು ರೈತರಿಗೆ ಕೃಷಿ ಸಾಲ ಕೊಡ್ತಿವೆ. ಆದರೆ ಏಕಾಏಕಿ ಇದರಲ್ಲಿ ಬದಲಾವಣೆ ಮಾಡಲಾಗಿದೆ ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಕರ್ನಾಟಕದ ಬಹುತೇಕ ರೈತರು ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ್ತ ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕುಗಳು ಕೃಷಿ ಸಾಲ ವಿತರಣೆ ಸಾಮರ್ಥ್ಯ ಕಡಿಮೆಯಾಗಲಿದೆ ಅಲ್ಲದೆ ಇದರಿಂದ ಕೃಷಿ ಕ್ಷೇತ್ರಕ್ಕೆ ಹಾಗೂ ರೈತರಿಗೆ ಹಿನ್ನಡೆ ಆಗುತ್ತದೆ. ಇತರ ಡಿಸಿಸಿ ಬ್ಯಾಂಕುಗಳು ನಬಾರ್ಡ್ ನೀಡುವ ಹಣದಲ್ಲೇ ರೈತರಿಗೆ ಕೃಷಿ ಸಾಲ ನೀಡುತ್ತದೆ ನಬಾರ್ಡ್ ಸಾಲದ ಮೊತ್ತ ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕ್ಗಳ ಕೃಷಿ ಸಾಲದ ಮೇಲೆ ಪರಿಣಾಮ ಬೀರಲಿದೆ ಇದರಿಂದ ಕೃಷಿಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಈಗಾಗಲೇ ಕೃಷಿ ಚಟುವಟಿಕೆ ಚುರುಕಾಗಿದೆ ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೃಷಿ ಚಟುವಟಿಕೆಗೆ ಹಣದ ಅಗತ್ಯವಿದೆ ರೈತರು ಸಹಕಾರಿ ಬ್ಯಾಂಕುಗಳಿಂದ ಕೃಷಿ ಸಾಲ ಸಿಗುವ ನಿರೀಕ್ಷೆಯಲ್ಲಿದ್ದಾರೆ ಆದರೆ ನಬಾರ್ಡ್ ಸಾಲದ ಮೊತ್ತ ಕಡಿಮೆ ಮಾಡಲು ಮುಂದಾಗಿದೆ. ಇದರಿಂದ ಮುಂಗಾರು ಹಂಗಾಮಿನಲ್ಲಿ ಮಾತ್ರವಲ್ಲ ಹಿಂಗಾರು ಹಂಗಾಮಿನ ಅವಧಿಯ ಕೃಷಿ ಸಾಲದ ಮೇಲು ಪರಿಣಾಮ ಆಗಲಿದೆ.

Leave a Reply

Your email address will not be published. Required fields are marked *