ತುಮಕೂರು!!ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಬಸ್‌ ಪಲ್ಟಿ, 30 ಪ್ರಯಾಣಿಕರು ಪಾರು

ತುಮಕೂರು!!ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿ, 30 ಪ್ರಯಾಣಿಕರು ಪಾರು

ತುಮಕೂರು:- ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ, 30 ಪ್ರಯಾಣಿಕರಿಗೆ ಗಾಯವಾಗಿರುವ ಭೀಕರ ಅಪಘಾತ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಗಾಯಗೊಂಡ ಪ್ರಯಾಣಿಕರನ್ನ ಸಿರಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 48ರ ಹೆಗ್ಗನಹಳ್ಳಿ ಗ್ರಾಮದ ಸಮೀಪ ಈ ಭೀಕರ ಘಟನೆ ಜರುಗಿದೆ.

ತುಮಕೂರು ಜಿಲ್ಲೆ, ಸಿರಾ ತಾಲ್ಲೂಕಿನ ಹೆಗ್ಗನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಳ್ಳಾರಿ, ಚಳ್ಳಕೆರೆ, ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಬಸ್ ತೆರಳುತ್ತಿತ್ತು. ಬೆಳಗ್ಗೆ 7.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ನಾಗಶ್ರೀ ಟ್ರಾವೆಲ್ಸ್ ಎಂಬ ಬಸ್ ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲೇ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡಿದರು. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Leave a Reply

Your email address will not be published. Required fields are marked *