ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕಡೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ಒಟ್ಟು ಎಂಟು ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಲಾಗಿದೆ. ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ ಲೋಕಾಯುಕ್ತ ಅಧಿಕಾರಿಗಳು.
ಸಾರಿಗೆ ಇಲಾಖೆ ಜಂಟಿ ನಿರ್ದೇಶಿಕ ಶೋಭಾ ಮನೆ. ಚಿಕ್ಕಮಗಳೂರು ಜಿಲ್ಲೆ ಕಡೂರಿನ ಕುಟುಂಬ ಕಲ್ಯಾಣ ಇಲಾಖೆಯ ಡಾ. ಎಸ್ ಎನ್ ಉಮೇಶ್ ಮನೆ, ಬೀದರ್ ಜಿಲ್ಲೆಯ ಸಣ್ಣ ನೀರಾವರಿಯ ಇಲಾಖೆ ಇನ್ಸ್ಪೆಕ್ಟರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪೂರ ತಹಶಿಲ್ದಾರ ಪ್ರಕಾಶ್ ಶ್ರೀಧರ್ ಗಾಯಕವಾಡ ಮನೆ ಮೇಲೆ ದಾಳಿ ಮಾಡಲಾಗಿದೆ.
ತುಮಕೂರು ಜಿಲ್ಲೆಯ ನಿವೃತ್ತ ಅರ್ ಟಿ ಓ ಅಧಿಕಾರಿ ರಾಜು ಅವರ ಮನೆ ಮೇಲೆ, ಗದಗ ಜಿಲ್ಲೆಯ ಬೆಟಿಗೇರಿಯ ಮುನಿಸಿಪಾಟಿಯ ಎಇಇ ಹುಚ್ಚೇಶ ಮನೆ, ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣ ಅಧಿಕಾರಿ ಆರ್ ಎಚ್ ಲೋಕೇಶ್ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೂ. ಇಂಜಿನಿಯರ್ ಹುಲಿ ರಾಜ್ ಮನೆ ಮೇಲೆ ಕೂಡ ದಾಳಿ ಮಾಡಲಾಗಿದೆ.