ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಾಟ ಐಪಿಎಲ್ ಪಂದ್ಯಗಳಿಗೆ ಏಪ್ರಿಲ್ 2ರಿಂದ ಚಾಲನೆ ಸಿಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಪಂದ್ಯಕ್ಕೆ ನಾಳೆ ಬೆಂಗಳೂರು ಆತಿಥ್ಯ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಪಂದ್ಯದ ಸಂದರ್ಭದಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡುಗಳನ್ನು ಮಾಡಲಾಗಿದೆ. ಏಪ್ರಿಲ್ 2ರಿಂದ ಮೇ 5ರ ವರೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುವ ದಿನಗಳಲ್ಲಿ ಸಂಜೆ 3 ಗಂಟೆಯಿAದ ರಾತ್ರಿ 11ರ ವರೆಗೆ ಈ ಮಾರ್ಪಾಡು ಇರಲಿದೆ.
ಎಲ್ಲೆಲ್ಲಿ ನೋ ಪಾರ್ಕಿಂಗ್?
ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ
ರಾಜಭವನ ರಸ್ತೆಯಲ್ಲಿ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ
ಸೆಂಟ್ರಲ್ ಸ್ಟ್ರೀಟ್ನ ಎರಡೂ ಕಡೆ
ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ವರೆಗೆ ರಸ್ತೆಯ ಎರಡೂ ಕಡೆ
ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್ನಿAದ ಡಿಕೆನ್ಸನ್ ರಸ್ತೆ ಜಂಕ್ಷನ್ವರೆಗೆ ಬಿ.ಎಂ.ಟಿ.ಸಿ ಬಸ್ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ
ಸೈಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್ನಿAದ ಅನಿಲ್ ಕುಂಬ್ಳೆ ವೃತ್ತದವರೆಗೆ
ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೈಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ
ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ
ಕಬ್ಬನ್ ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಪೌಂಟೇನ್ ರಸ್ತೆ
ಲ್ಯಾವೆಲ್ಲಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್ ವರೆಗೆ
ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೈಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಪಾರ್ಕಿಂಗ್ ಸ್ಥಳಗಳು (ಮಧ್ಯಾಹ್ನ 11 ಗಂಟೆಯಿAದ ರಾತ್ರಿ 9ರವರೆಗೆ):
ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರು ವಾಹನಗಳನ್ನು ಈ ಸ್ಥಳಗಳಲ್ಲಿ ಪಾರ್ಕ್ ಮಾಡಲು ಅವಕಾಶ ನೀಡಲಾಗಿದೆ.
ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯುಬಿ ಸಿಟಿ ಪಾರ್ಕಿಂಗ್ ಸ್ಥಳ
ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ
ಕೆಎಸ್ಸಿಎ ಸದಸ್ಯರ ವಾಹನಗಳನ್ನ ಸೆಂಟ್ ಜೋಸೆಫ್ (ಯೂರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ಯಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲೂ ವಾಹನಗಳ ನಿಲುಗಡೆ ಸ್ಥಳದ ಕೊರತೆ ಇರುವುದರಿಂದ ಹಾಗೂ ಕ್ರೀಡಾಂಗಣ ಸುತ್ತಮುತ್ತ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ (ಬಿಎಂಟಿಸಿ ಹಾಗೂ ಮೆಟ್ರೋ) ಸೇವೆಯನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಕೋರಿದ್ದಾರೆ.