ಬೆಂಗಳೂರು || ಮಳೆ ಸಮಸ್ಯೆ ತಡೆಯಲು ಅಗತ್ಯ ಕ್ರಮಗಳ ಕೈಗೊಳ್ಳಿ: ಅಧಿಕಾರಿಗಳಿಗೆ BBMP ಸೂಚನೆ

ಬೆಂಗಳೂರಿನಲ್ಲಿ ಈ ಕೆಲಸಕ್ಕೆ ಕಮಿಷನರ್ ಅನುಮತಿ ಕಡ್ಡಾಯ, ತಪ್ಪಿದರೆ ದಂಡ!

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳ ತೆಗೆದುಕೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದ ಉಂಟಾಗುವ ಸಮಸ್ಯೆ ತಪ್ಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ತುಷಾರ್ ಗಿರಿನಾಥ್ ಅವರು ಸಭೆ ನಡೆಸಿದರು.

ಈ ವೇಳೆ ಸಾಯಿ ಲೇಔಟ್, ಪೈ ಲೇಔಟ್, ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್, ಕೋಗಿಲು ಕ್ರಾಸ್, ಸರ್ಜಾಪುರ ರಸ್ತೆ (ಇಬ್ಲೂರು ಜಂಕ್ಷನ್), ಅಬ್ಬಿಗೆರೆ ಕೆರೆ ಕೋಡಿ, ಮೈಸೂರು ರಸ್ತೆ, ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಮತ್ತು ಇತರ ಸ್ಥಳಗಳಲ್ಲಿ ಮಳೆಗಾಲ ಪ್ರಾರಂಭವಾಗುವ ಮೊದಲು ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಈ ವೇಳೆ ನಗರದಲ್ಲಿ 11 ಹೊರ ಪ್ರವಾಹ ಪೀಡಿತ ಸ್ಥಳಗಳು ಸೇರಿದಂತೆ ಒಟ್ಟು 209 ಸ್ಥಳಗಳ ಪೈಕಿ ಈಗಾಗಲೇ 166 ಸ್ಥಳದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *