ಬೆಂಗಳೂರು ಎರಡನೇ ವಿಮಾನ ನಿಲ್ದಾಣ: ಇಲ್ಲಿ ನಿರ್ಮಾಣವಾದರೆ ಸಂಕಷ್ಟ!

ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಈ ಭಾಗಕ್ಕೆ 5 ಭರ್ಜರಿ ಬಂಪರ್!

ಬೆಂಗಳೂರು : ಸೆಕೆಂಡ್ ಏರ್ಪೋರ್ಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದು. ಜಾಗ ಪರಿಶೀಲನೆ ಸಹ ಮುಕ್ತಾಯವಾಗಿದೆ. ಆದರೆ ಇದೀಗ ಬೆಂಗಳೂರಿನ ಈ ಭಾಗದಲ್ಲಿ ಯಾವುದೇ ಕಾರಣಕ್ಕೂ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಬೇಡ ಅಥವಾ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಸೂಕ್ತವಲ್ಲ ಎಂದು ಪ್ರಭಾವಿ ಸಚಿವರೊಬ್ಬರು ಹೇಳಿದ್ದಾರೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಬೆಂಗಳೂರಿಗೆ ಲಾಭವಾಗುವುದಕ್ಕಿಂತ ಸಮಸ್ಯೆಯೇ ಆಗಲಿದೆ ಎಂದು ಹೇಳಲಾಗಿದೆ. ಹಾಗಾದರೆ ಯಾವ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಬೇಡ ಎಂದು ಹೇಳಲಾಗುತ್ತಿದೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ಜೋರಾಗಿರುವಾಗಲೇ ಯಾವುದೇ ಕಾರಣಕ್ಕೂ ಈ ಒಂದು ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಡಿ. ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ಮರುಪರಿಶೀಲನೆ ನಡೆಸಿ ಎಂದು ಹೇಳಲಾಗಿದೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಭಾವಿ ಸಚಿವರ ನಡುವೆ ಭಾರೀ ಪೈಪೋಟಿ ಇದೆ. ಸಚಿವರಾದ ಜಿ ಪರಮೇಶ್ವರ್ – ಡಿ.ಕೆ ಶಿವಕುಮಾರ್ ಅವರು ನಡುವೆ ಪೈಪೋಟಿ ಇದೆ. ಇಬ್ಬರು ಪ್ರಭಾವಿ ನಾಯಕರು ಒಂದೊಂದು ಜಾಗವನ್ನು ಹೇಳುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಅವರು ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಜಾಣ್ಮೆ ಪ್ರದರ್ಶಿಸುತ್ತಿದ್ದಾರೆ.

ಈ ಎಲ್ಲಾ ನಾಯಕರ ಪೈಪೋಟಿಯ ನಡುವೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗ ನಿಗದಿ ಮಾಡಿರುವ ಅಥವಾ ಶಾರ್ಟ್ ಲಿಸ್ಟ್ ಮಾಡಿರುವ ಜಾಗ ಸೂಕ್ತವಲ್ಲ. ಇದರಿಂದ ಬೆಂಗಳೂರಿಗೆ ಲಾಭವಾಗುವುದಕ್ಕಿಂತಲೂ ನಷ್ಟವೇ ಹೆಚ್ಚಾಗಿ ಆಗಲಿದೆ. ಹೀಗಾಗಿ, ಶಿರಾದಲ್ಲಿ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೂಕ್ತ ಎಂದು ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.

ಬೆಂಗಳೂರಿನ ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣ ಬೇಡ: ಇನ್ನು ಎರಡನೇ ವಿಮಾನ ನಿಲ್ದಾಣಕ್ಕೆ ಗುರುತು ಮಾಡಲಾಗಿರುವ ಮೂರು ಜಾಗಗಳು ಬೆಂಗಳೂರಿನ ದಕ್ಷಿಣ ಭಾಗದ ವ್ಯಾಪ್ತಿಯಲ್ಲಿವೆ. ಆದರೆ ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಸೂಕ್ತವಲ್ಲ ಎಂದು ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ನೆಲಮಂಗಲ ಇಲ್ಲವೇ ಶಿರಾ ಎಲ್ಲಿಯಾದರೂ ವಿಮಾನ ನಿಲ್ದಾಣ ನಿರ್ಮಾಣ ಮಾಡಲಿ. ಇದಕ್ಕೆ ನಮ್ಮ ಸಹಮತ ಇದ್ದೇ ಇದೆ ಅಂತ ಅವರು ಹೇಳಿದ್ದಾರೆ.

ಮುಂದುವರಿದು ಇನ್ನೊಂದು (ಬಿಡದಿ) ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಏನೂ ಪ್ರಯೋಜನ ಇಲ್ಲ ಅಂತ ಹೇಳಿದ್ದಾರೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ, ಬೆಂಗಳೂರಿನಲ್ಲಿ ಇನ್ನಷ್ಟು ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಲಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಯಾವುದೇ ಕಾರಣಕ್ಕೂ ಬಿಡದಿ ಬೇಡ ಎಂಬರ್ಥದಲ್ಲಿ ಅವರು ಮಾತನಾಡಿದ್ದಾರೆ. ಆದರೆ ನೇರವಾಗಿ ಬಿಡದಿ ಎಂದು ಹೇಳಿಲ್ಲ.

Leave a Reply

Your email address will not be published. Required fields are marked *