ರಾಯಚೂರು: ಜಿಲ್ಲೆಯಲ್ಲಿ ಇಂದು ನಡೆಯಬೇಕಾಗಿದ್ದ ಮಾಕ್ ಡ್ರಿಲ್ ಅನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ದೇಶದ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಸಲಾಗುತ್ತಿದೆ. ಆಯಾ ಜಿಲ್ಲೆಗಳ ಸೂಕ್ಷ್ಮತೆ ಆಧಾರದಲ್ಲಿ ವರ್ಗ-1, ವರ್ಗ-2 ಹಾಗೂ ವರ್ಗ-3 ಅಂತ ಕೇಂದ್ರ ಗೃಹ ಇಲಾಖೆ ವಿಂಗಡಿಸಿತ್ತು. ಆದರೆ, ತಾತ್ಕಾಲಿಕವಾಗಿ ಮಾಕ್ ಡ್ರಿಲ್ ಅನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಡಳಿತವು ಮಾಹಿತಿ ನೀಡಿದೆ.
ಕರ್ನಾಟಕದ ಮೂರು ಕಡೆಗಳಲ್ಲಿ ಮಾಕ್ ಡ್ರಿಲ್ಗೆ ಕೇಂದ್ರ ಸರ್ಕಾರ ಸ್ಥಳಗಳನ್ನು ಸೂಚಿಸಿತ್ತು. ಇದರಲ್ಲಿ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆಸಲು ಸಿದ್ಧತೆ ಮಾಡಿಕೊಂಡು, ಇಂದು ಮಾಕ್ ಡ್ರಿಲ್ ನಡೆಯಲಿದೆ ಎಂದು ತಿಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ತಾತ್ಕಾಲಿಕವಾಗಿ ಮೂಂದೂಡಿದ್ದು, ಮುಂದಿನ ಒಂದು ವಾರದಲ್ಲಿ ನಡೆಯುವ ಸಾಧ್ಯತೆಯಿದೆ.
ಸಮಾವೇಶ ರದ್ದು: ಪಹಲ್ಗಾಮ್ ಉಗ್ರ ಕೃತ್ಯಕ್ಕೆ ಪತ್ಯುತ್ತರವಾಗಿ ಭಾರತೀಯ ಸೇನೆಯ ದಿಟ್ಟ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸಿ ಇಂದು ರಾಯಚೂರಿನಲ್ಲಿ ನಡೆಯಬೇಕಿದ್ದ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ‘ಸಂವಿಧಾನ ರಕ್ಷಿಸಿ ಅಭಿಯಾನ’ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧದ ಬೃಹತ್ ಪ್ರತಿಭಟನಾ ಸಮಾವೇಶವನ್ನು ರದ್ದುಗೊಳಿಸಲಾಗಿದೆ.