ಭೂಕಬಳಿಕೆ ಆರೋಪ: HD Kumaraswamy ಗೆ ಬಿಗ್ ರಿಲೀಫ್ ನೀಡಿದ High Court

ಭೂಕಬಳಿಕೆ ಆರೋಪ: HD Kumaraswamy ಗೆ ಬಿಗ್ ರಿಲೀಫ್ ನೀಡಿದ High Court

ಬೆಂಗಳೂರು: ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸರ್ಕಾರ ರಚಿಸಿದ್ದ ಎಸ್ಐಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ, ನ್ಯಾ.ಇ.ಎಸ್.ಇಂದಿರೇಶ್ರಿಂದ ಆದೇಶ ಹೊರಡಿಸಲಾಗಿದೆ.

ಹೆಚ್ಡಿಕೆ ಪರ ಉದಯ್ ಹೊಳ್ಳ, ಎ.ವಿ.ನಿಶಾಂತ್ ವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ಗೆ ಹೆಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ ಹೆಚ್ಡಿ ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಮತ್ತು ಎ.ವಿ.ನಿಶಾಂತ್ ವಾದ ಮಂಡಿಸಿದ್ದು, ಅಧಿಸೂಚನೆಯಿಲ್ಲದೇ ಎಸ್ಐಟಿ ರಚನೆ ಕಾನೂನುಬಾಹಿರ. ಎಸ್ಐಟಿಯ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಮನವಿ ಮಾಡಿದರು.

Leave a Reply

Your email address will not be published. Required fields are marked *