ಹಾಸನ : ಹಾಸನ ಜಿಲ್ಲೆಯಲ್ಲಿ ವ್ಯಾಪಕ ಮಳೆ ನಡುವೆ ಇದೀಗ ಜನರಿಗೆ ಹಾವುಗಳ ಕಾಟ ಶುರುವಾಗಿದೆ. ನಿರಂತರ ಮಳೆಯಿಂದಾಗಿ ಹಾವುಗಳ ಹಾವಳಿ ಹೆಚ್ಚಾಗಿದ್ದು, ಜನವರು ಭಯಭೀತರಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಮನೆ ಬಳಿ ಒಂದು ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೇವಾಲದಕೆರೆ ಗ್ರಾಮ ಪ್ರಸನ್ನಕುಮಾರ್ ಎಂಬುವವರ ಮನೆಯ ಆವರಣದಲ್ಲಿ 12 ಅಡಿ ಉದ್ದು ಕಿಂಗ್ ಕೋಬ್ರಾ ಕಾಣಿಸಿಕೊಂಡಿದೆ. ಜನವಸತಿ ಪ್ರದೇಶದಲ್ಲಿ ಪದೇ ಪದೇ ಕಾಳಿಂಗ ಸರ್ಪ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.