ಹಾಸನ: 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ, ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿ ಸುಪ್ರಿಯಾ (22) ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ. ಕುಟುಂಬಸ್ಥರು ಬೆಂಗಳೂರಿನ (Bengaluru) ಬ್ಯಾಟರಾಯನಪುರದಲ್ಲಿ ವಾಸವಿದ್ದರು
ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡ್ತಿದ್ದ ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದಳು. ನಿನ್ನೆ (ಜೂ.25) ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಪೋಷಕರಿಗೆ ಹೇಳಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಪೋಷಕರು ಸುಪ್ರಿಯಾಳನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಸುಪ್ರಿಯಾ ಸಾವನ್ನಪ್ಪಿದ್ದಾಳೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ 15 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.