ಹಾಸನ || Arjuna ಭೌತಿಕವಾಗಿ ಇಲ್ಲದಿದ್ದರೂ ಕನ್ನಡಿಗರ ಹೃದಯದಲ್ಲಿ ನೆಲೆಸಿದ್ದಾನೆ: Ishwara Khandre.

ಹಾಸನ || Arjuna ಭೌತಿಕವಾಗಿ ಇಲ್ಲದಿದ್ದರೂ ಕನ್ನಡಿಗರ ಹೃದಯದಲ್ಲಿ ನೆಲೆಸಿದ್ದಾನೆ: Ishwara Khandre.

ಹಾಸನ : ಎಂಟು ಬಾರಿ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಎಲ್ಲ ಕನ್ನಡಿಗರ ಹೃದಯದಲ್ಲಿ ನೆಲೆಸಿದ್ದಾನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಅರ್ಜುನನ ಪ್ರತಿರೂಪದಂತಿರುವ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಯಾಪ್ಟನ್ ಎಂದೇ ಖ್ಯಾತನಾಗಿದ್ದ ಅರ್ಜುನ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ಬಳಿ ಮದಗಜ ಸೆರೆ ಕಾರ್ಯಾಚರಣೆ ವೇಳೆ 2023ರ ಡಿಸೆಂಬರ್ 4ರಂದು ಏಕಾಂಗಿಯಾಗಿ ಹೋರಾಡಿ ಮಡಿದ.  ಮಾವುತ ಮತ್ತು ಹಲವು ಅರಣ್ಯ ಸಿಬ್ಬಂದಿಯ ಜೀವ ಉಳಿಸಿ ತನ್ನ ಜೀವ ಬಲಿಕೊಟ್ಟ. ಅರ್ಜುನನ ಅಗಲಿಕೆಯ ನೋವು ನಿರಂತರವಾಗಿ ಕಾಡುತ್ತದೆ ಎಂದರು.

ನರಹಂತಕ ಹುಲಿ ಸೆರೆ ಕಾರ್ಯಾಚರಣೆ ಅಥವಾ ಆನೆ ಸೆರೆ ಕಾರ್ಯಾಚರಣೆ ಎಂದರೆ ಮೊದಲು ಬರುತ್ತಿದ್ದ ಹೆಸರೇ ಅರ್ಜುನ ಆನೆಯದು. ಅಷ್ಟು ವಿಶ್ವಾಸಾರ್ಹತೆ ಇದ್ದ ಅರ್ಜುನನ ಅಕಾಲಿಕ ಸಾವಿನ ನೋವಿದೆ. ಆದರೆ ಅರ್ಜುನನ ನೆನಪು ಚಿರಸ್ಥಾಯಿಯಾಗಿ ಉಳಿಯುವಂತೆ ಯಸಳೂರು ಮತ್ತು ಡಿಬಿಕುಪ್ಪೆಯ ಬಳ್ಳೆಯಲ್ಲಿ ಎರಡು ಸ್ಮಾರಕ ನಿರ್ಮಿಸಲಾಗಿದ್ದು, ಮೊದಲಿಗೆ ಬಳ್ಳೆಯಲ್ಲಿ ಸ್ಮಾರಕ ಉದ್ಘಾಟಿಸಲಾಗುತ್ತಿದೆ ಎಂದರು.

ದಸರಾ ಮಹೋತ್ಸವದಲ್ಲಿ 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಜನಮನ ಗೆದ್ದಿದ್ದ ಅರ್ಜುನ ಸುಮಾರು 5600 ಕೆ.ಜಿ. ತೂಕವಿದ್ದ. ಅರ್ಜುನ 2023ರ ಡಿಸೆಂಬರ್ 4ರಂದು ಮೃತಪಟ್ಟಾಗ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿತ್ತು ಅರ್ಜುನ ಮೃತದೇಹವನ್ನು ಬಳ್ಳೆಗೆ ತಂದು ಸಮಾಧಿ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದರು. ಆದರೆ ಮೃತ ಆನೆಯನ್ನು ನೂರಾರು ಕಿಲೋ ಮೀಟರ್ ತಂದು ಸಮಾಧಿ ಮಾಡುವುದು ಕಷ್ಟಸಾಧ್ಯ. ದೇಹದಲ್ಲಿ ಗಾಳಿ ಸೇರಿ ಸ್ಫೋಟವಾಗುವ ಭೀತಿ ಇತ್ತು. ಹೀಗಾಗಿ ಯಸಳೂರು ಬಳಿಯ ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ ಸಮಾಧಿ ಮಾಡಲಾಯಿತು ಎಂದು ಈಶ್ವರ ಖಂಡ್ರೆ ತಿಳಿಸಿದರು.

ತಾವು ಬೆಳಗಾವಿಯಿಂದ ಯಸಳೂರಿಗೆ ತೆರಳಿ, ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿದ್ದನ್ನು ಸ್ಮರಿಸಿದ ಅವರು, ಆಗ  ಸಮಾಧಿ ಸ್ಥಳ ದಬ್ಬಳ್ಳಿಕಟ್ಟೆಯಲ್ಲಿ ಮತ್ತು ಅರ್ಜುನ ವಾಸವಾಗಿದ್ದ ಬಳ್ಳೆ ಶಿಬಿರದಲ್ಲಿ ಸ್ಮಾರಕವನ್ನು ನಿರ್ಮಿಸುವುದಾಗಿ ಹೇಳಿದ್ದೆ. ಅದರಂತೆ ಇಂದು ಇಲ್ಲಿ ಸ್ಮಾರಕ ಉದ್ಘಾಟಿಸಲಾಗುತ್ತಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *