ಆನೇಕಲ್: ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಸ್ತೆ ಕಾಮಗಾರಿಯಿಂದಾಗಿ ವಾಹನಗಳು ನಿಧಾನವಾಗಿ ಸಾಗುತ್ತಿದ್ದಾಗ ಲಾರಿಯ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಘಟನೆ ವೇಳೆ ಕಿಲೋಮೀಟರ್ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು.




