ವಿಷ್ಣುವರ್ಧನ್ ಸ್ಮಾರಕವನ್ನು ನೆಲಸಮ ಮಾಡಿದ್ದಕ್ಕೆ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಹಾಗಾಗಿ ಅಭಿಮಾನ್ ಸ್ಟುಡಿಯೋ ಬಳಿ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಅದೇ ಜಾಗದಲ್ಲಿ ವಿಷ್ಣುವರ್ಧನ್ ಅವರ ಪುಣ್ಯಭೂಮಿ ಆಗಬೇಕು ಎಂದು ಫ್ಯಾನ್ಸ್ ಒತ್ತಾಯ ಮಾಡಿದ್ದಾರೆ.
‘ರಾತ್ರೋರಾತ್ರಿ ಸಮಾಧಿ ನೆಲಸಮ ಮಾಡಿದ್ದು ಸರಿಯಲ್ಲ. ಇದರಿಂದ ಕೋಟ್ಯಂತರ ಅಭಿಮಾನಿಗಳಿಗೆ ನೋವು ಉಂಟುಮಾಡಲಾಗಿದೆ. ನಮ್ಮ ಹೋರಾಟ ನಿಲ್ಲುವುದಿಲ್ಲ. ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ’ ಎಂದು ವಿಷ್ಣುವರ್ಧನ್ ಅವರ ಅಭಿಮಾನಿಗಳು ಹೇಳಿದ್ದಾರೆ.
For More Updates Join our WhatsApp Group :