ಸಿಎಂ ಪರ ಇರುವ ಕೆ. ಎನ್. ರಾಜಣ್ಣ ಅವರು ಸಹಕಾರ ಸಚಿವ ಸ್ಥಾನದಿಂದ ರಾಜೀನಾಮೆ ಸಲ್ಲಿಸಿದ ಕಾರಣವೇನು?

ಸಿಎಂ ಪರ ಇರುವ ಕೆ. ಎನ್. ರಾಜಣ್ಣ ಅವರು ಸಹಕಾರ ಸಚಿವ ಸ್ಥಾನದಿಂದ ರಾಜೀನಾಮೆ ಸಲ್ಲಿಸಿದ ಕಾರಣವೇನು?

ಬೆಂಗಳೂರು: ಶಾಸಕ ಕೆಎನ್​ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ವಿಪಕ್ಷ ನಾಯಕ ಆರ್ ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. 2 ಗಂಟೆ ಹಿಂದೆಯೇ ಕೆಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಯಾವ ಕಾರಣಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಕೊಟ್ಟಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಇರುವ ಭ್ರಷ್ಟಾಚಾರ ಏನು? ಎಷ್ಟು ಹಣ ಹೊಡೆದಿದ್ದಾರೆ, ಎಲ್ಲಿ ಇಟ್ಟಿದ್ದಾರೆಂಬ ಮಾಹಿತಿ ಬೇಕು. ಕೆಎನ್​ ರಾಜಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿದ್ದವರು. ಅವರ ರಾಜೀನಾಮೆ ಪಡೆಯಲು ಕಾರಣವೇನು? ಇದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಪ್ರಶ್ನಿಸಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *