ಬೆಂಗಳೂರು: ಕೆಲ ದಿನಗಳ ಹಿಂದೆ ನಗರದ ಕುಂಬಳಗೋಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ಮಲತಂದೆಯೇ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿತ್ತು. ಆರೋಪಿ ದರ್ಶನ್ ತನ್ನ ಮಗಳು ಸಿರಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಇದೀಗ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ತನಿಖೆ ಮುಂದುವರೆದಿದೆ.
7 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಂದ ಮಲತಂದೆ
ಶುಕ್ರವಾರ ಸಂಜೆ ಕೆಲಸಕ್ಕೆ ಹೋಗಿದ್ದ ತಾಯಿ ಇನ್ನೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಶಾಲೆಯಿಂದ ಬಂದ ಬಾಲಕಿ ಮನೆಗೆ ಹೋಗದೆ ಪರಿಚಯಸ್ಥರ ಅಂಗಡಿ ಬಳಿ ನಿಂತಿದ್ದಳು. ಈ ವೇಳೆ ಮನೆಯಲ್ಲಿದ್ದ ದರ್ಶನ್, ಬಾಲಕಿಯನ್ನು ಹುಡುಕಿಕೊಂಡು ಬಂದಿದ್ದ. ಅಂಗಡಿ ಬಳಿ ಇದ್ದ ಸಿರಿಯನ್ನು ಮನೆಗೆ ಕರೆದಾಗ ತಾನು ಮನೆಗೆ ಬರುವುದಿಲ್ಲವೆಂದು ಹಠ ಮಾಡಿದ್ದಳು. ಈತ ನನಗೆ ಹೊಡೆಯುತ್ತಾನೆ ಎಂದು ಎಲ್ಲರ ಎದುರು ಹೇಳಿದ್ದಳು. ಆದರೂ ದರ್ಶನ್ ಬಲವಂತವಾಗಿ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ.
ಮನೆಗೆ ಬಂದ ನಂತರ ಕೋಪದಲ್ಲಿ ಕೈಯಲ್ಲೇ ಬಲವಾಗಿ ಥಳಿಸಿದ್ದಾನೆ. ಬಾಲಕಿಯನ್ನು ನೆಲಕ್ಕೆ ತಳ್ಳಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ವೇಳೆ ಬಾಲಕಿಯ ಮೂಗಿನಲ್ಲಿ, ಬಾಯಿಯಲ್ಲಿ ರಕ್ತ ಬಂದಿತ್ತು. ಸಾಕ್ಷ್ಯ ನಾಶ ಮಾಡಲು ರಕ್ತದ ಕಳೆಯನ್ನೆಲ್ಲಾ ತೊಳೆದಿದ್ದಾನೆ. ನಂತರ ಮನೆಗೆ ಬಂದ ಬಾಲಕಿಯ ತಾಯಿ ಶಿಲ್ಪಾ ಬಳಿ ಮಗು ಮಾತನಾಡುತ್ತಿಲ್ಲವೆಂದು ದರ್ಶನ್ ಹೇಳಿದ್ದ. ಆಕೆ ತನ್ನ ಮಗುವಿನ ಪರಿಸ್ಥಿತಿ ಕಂಡು ಕಿರುಚಿಕೊಂಡಿದ್ದಳು. ಇದೇ ವೇಳೆ ದರ್ಶನ್ ಶಿಲ್ಪಾಳನ್ನು ರೂಮಿನಲ್ಲಿ ಕೂಡಿಹಾಕಿ ಬೈಕ್ನಲ್ಲಿ ಪರಾರಿಯಾಗಿದ್ದವನು ಈಗ ಕುಂಬಳಗೋಡು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
For More Updates Join our WhatsApp Group :




