ಕೊಪ್ಪಳ : ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಶುಕ್ರವಾರ ರಾತ್ರಿ ಮೂರು ಗಂಟೆ ಸುಮಾರಿಗೆ ಮೊಸಳೆಯೊಂದು ಮನೆಗೆ ಬಂದಿದೆ. ಆನೆಗೊಂದಿ ಗ್ರಾಪಂ ಪಕ್ಕದ ವೆಂಕಟರಮಣ ಎಂಬವರ ಮನೆ ಜಗುಲಿಗೆ ಮೊಸಳೆ ಬಂದಿದೆ. ತುಂಗಭದ್ರಾ ನದಿಯಿಂದ ಮೊಸಳೆ ಗ್ರಾಮಕ್ಕೆ ಬಂದಿದೆ ಎನ್ನಲಾಗಿದೆ. ಕೂಡಲೇ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮನೆಗೆ ಬಂದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
For More Updates Join our WhatsApp Group :
