ಬೀಡಿ–ಸಿಗರೇಟ್ ನಿಷೇಧಕ್ಕೆ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಧರಣಿ.

ಬೀಡಿ–ಸಿಗರೇಟ್ ನಿಷೇಧಕ್ಕೆ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಧರಣಿ.

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು ಪ್ರತಿಭಟನೆಗಿಳಿದಿದ್ದಾರೆ. ಕಳೆದ ಮೂರು ದಿನಗಳಿಂದ ಊಟ ತಿಂಡಿ ಬಿಟ್ಟು ಧರಣಿ ಮಾಡುತ್ತಿರುವ ಬಂಧಿತರು ನಿಷೇಧಿತ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಶೋಧದ ವೇಳೆ 50ಕ್ಕೂ ಹೆಚ್ಚು  ಮೊಬೈಲ್‌ಗಳು ವಶ

ಜೈಲು ಕೈಪಿಡಿ ಪ್ರಕಾರ ಈ ವಸ್ತುಗಳ ಮಾರಾಟ ಕಾನೂನುಬಾಹಿರವಾಗಿರುವ ಕಾರಣ ಜೈಲು ಸಿಬ್ಬಂದಿಯೇ ಇದುವರೆಗೆ ಅವುಗಳನ್ನು ಒಳಕ್ಕೆ ತರಲಾಗುತ್ತಿದ್ದುದಾಗಿ ಆರೋಪಿಸಲಾಗಿತ್ತು. ಇತ್ತೀಚಿನ ವಿಶೇಷ ಶೋಧ ಕಾರ್ಯಾಚರಣೆಯಲ್ಲಿ 50ಕ್ಕೂ ಹೆಚ್ಚು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದ್ದರಿಂದ ಆಡಳಿತ ಮತ್ತಷ್ಟು ಜಾಗೃತಗೊಂಡಿದೆ. ಈ ಹಿನ್ನೆಲೆ ಬೀಡಿ–ಸಿಗರೇಟ್ ಮಾರಾಟ ನಿಲ್ಲಿಸಿದ್ದಕ್ಕೆ ಅಸಮಾಧಾನಗೊಂಡ ಕೈದಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಳೆದ ಮೂರು ದಿನಗಳಿಂದ ಕೈದಿಗಳಿಂದ ಧರಣಿ ಮತ್ತು ಉಪವಾಸ ಪ್ರತಿಭಟನೆ ನಡೆಸುತ್ತಿದ್ದು, ಮಾರಾಟಕ್ಕೆ ಅನುಮತಿ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಜೈಲು ನಿಯಮಾವಳಿಯ ಪ್ರಕಾರವೇ ಕ್ರಮ ಜರುಗಿಸಲಾಗುವುದೆಂದು ಸ್ಪಷ್ಟಪಡಿಸಿದ್ದಾರೆ.

ಜೈಲಿನಲ್ಲಿನ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ನಂತರ, ಸರ್ಕಾರ ಜೈಲು ಆಡಳಿತದಲ್ಲಿ ಬದಲಾವಣೆ ಮಾಡಿ ಅಂಶುಕುಮಾರ್ ಅವರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಿಸಿತ್ತು. ಅವರ ನಿರ್ದೇಶನದಂತೆ ಜೈಲಿನಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಹಾಗೂ ಇತರ ನಿಷೇಧಿತ ವಸ್ತುಗಳ ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *