“ಡಿಕೆ ಶಿವಕುಮಾರ್ CM ಆದ್ರೆ ನನಗೆ ಸಚಿವ ಸ್ಥಾನ ಬೇಡ” – KNR

 “ಡಿಕೆ ಶಿವಕುಮಾರ್ CM ಆದ್ರೆ ನನಗೆ ಸಚಿವ ಸ್ಥಾನ ಬೇಡ” – KNR

CM ಬದಲಾವಣೆ ಚರ್ಚೆಯ ನಡುವೆಯೇ ರಾಜಣ್ಣ ಸ್ಟೋಟಕ ಹೇಳಿಕೆ.

ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ವೇಳೆ, ಮಾಜಿ ಸಚಿವ ಕೆ.ಎನ್​​ ರಾಜಣ್ಣ ಮಹತ್ವ ಹೇಳಿಕೆಯನ್ನು ನೀಡಿದ್ದಾರೆ. ಒಂದು ವೇಳೆ ಡಿಕೆ ಶಿವಕುಮಾರ್​​ ಮುಖ್ಯಮಂತ್ರಿಯಾದರೆ ನನಗೆ ಸಚಿವ ಸ್ಥಾನ ಬೇಡ ಮತ್ತೊಬ್ಬರಿಗೆ ಅವಕಾಶ ಕೊಡಲಿ.

ನನಗೆ ಯಾವ ಸ್ಥಾನವೂ ಬೇಕಾಗಿಲ್ಲ. ನಾನು ಮೊದಲೇ ಹೇಳಿದ್ದೇನೆ, ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಆದೇನು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ನನಗೆ ಅಧಿಕಾರದ ದಾಹ ಇಲ್ಲ ಎಂದು ಹೇಳಿದ್ದಾರೆ. ಇದೀಗ ಈ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *