ಬೆಳಗಾವಿ ಅಧಿವೇಶನದಲ್ಲಿ ಕುರ್ಚಿ ರಾಜಕೀಯ.

ಬೆಳಗಾವಿ ಅಧಿವೇಶನದಲ್ಲಿ ಕುರ್ಚಿ ರಾಜಕೀಯ.

CM ಕುರ್ಚಿ ಕಾಳಗಕ್ಕೆ ಹೊಸ ಮಸಾಲೆ: ಯತೀಂದ್ರ ಹೇಳಿಕೆ ಹಿನ್ನೆಲೆ ಗೋಜಿನ ರಾಜಕೀಯ.

ಬೆಳಗಾವಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕುರ್ಚಿ ಸಂಘರ್ಷಕ್ಕೆ ತೆರೆಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಸಿಎಂ ಕುರ್ಚಿಗಾಗಿ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಹೈಕಮಾಂಡ್ ಕುಳಿತು ಬಗೆಹರಿಸಿಕೊಳ್ಳುವಂತೆ ಸಿದ್ದರಾಮಯ್ಯ ,ಡಿಕೆ ಶಿವಕುಮಾರ್​​ಗೆ ಖಡಕ್ ಸೂಚನೆ ನೀಡಿತ್ತು. ಅದರಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್​​ ಮಾಡುವ ಮೂಲಕ ಯಾವುದೇ ಗೊಂದಲ ಇಲ್ಲ. ನಾವಿಬ್ಬರೂ ಒಂದಾಗಿದ್ದೇವೆ ಎನ್ನುವ ಸಂದೇಶ ರವಾನಿಸಿದ್ದರು. ಆದ್ರೆ, ಸದ್ಯಕ್ಕೇನು ಸುಮ್ನೆ ಆಗಿರಬಹುದು. ಆದ್ರೆ,​ ಬೆಳಗಾವಿ ಅಧಿವೇಶನದ ಬಳಿಕ ಪಿಚ್ಚರ್ ಬಾಕಿ ಹೈ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿ ಅಧಿವೇಶನದ ವೇಳೆಯಲ್ಲೇ ಮತ್ತೆ ಸಿಎಂ ಕುರ್ಚಿ ಕಾಳಗ ಶುರುವಾಗಿದ್ದು, ಇದಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯನವರ ಪುತ್ರ, ಎಂಎಲ್​​ಸಿ ಯತೀಂರ್ರ ಸಿದ್ದರಾಮಯ್ಯ ಕಹಳೆ ಮೊಳಗಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಅಧಿವೇಶನದ ನಡುವೆಯೇ ಕಾಂಗ್ರೆಸ್​​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ.

ಪುತ್ರನನ್ನು ಕರೆದೊಯ್ದು ಸಿಎಂ ರಹಸ್ಯ ಮಾತುಕತೆ.

ಹೌದು…ಚಳಿಗಾಲ ಅಧಿವೇಶದ ನಡೆಯುತ್ತಿರುವಾಗಲೇ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್​​ ಮನೆಯಲ್ಲಿ ಕಿಡಿ ಹೊತ್ತಿಸಿದೆ. ಎಲ್ಲವೂ ಕೂಲ್ ಆಯ್ತು ಎನ್ನುವಾಗಲೇ ಮತ್ತೆ ಸಿಎಂ ಪುತ್ರ ಯತೀಂದ್ರ ಪವರ್ ಶೇರಿಂಗ್ ವಿಚಾರವಾಗಿ ಮಾತನಾಡಿದ್ದಾರೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತಾ ಹೈಕಮಾಂಡ್ ಕೂಡ ಸ್ಪಷ್ಟವಾಗಿ ಹೇಳಿದೆ ಎಂದು ಯತೀಂದ್ರ ಪುನರುಚ್ಛರಿಸಿದ್ದಾರೆ.ಸಿದ್ದರಾಮಯ್ಯನವರೇ ಪುತ್ರನ ಮೂಲಕ ಈ ರೀತಿ ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಬಣ ಕೆಂಡಾಮಂಡಲವಾಗಿದೆ. ಇದು ತೀವ್ರ ಸ್ವರೂಪಕ್ಕೆ ಹೋಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಕರೆದ ರಹಸ್ಯ ಚರ್ಚೆ ನಡೆಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

.

Leave a Reply

Your email address will not be published. Required fields are marked *