ಪರಪ್ಪನ ಅಗ್ರಹಾರಕ್ಕೆ ಮೊದಲನೇಯ ಭೇಟಿ: DGP ಅಲೋಕ್ ಕುಮಾರ್.

ಮೊದಲ ಭೇಟಿಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ DGP ಅಲೋಕ್ ಕುಮಾರ್.

ಹೊಸ ಡಿಜಿಪಿ ಆಡಳಿತ ಶೈಲಿ: “ಎಲ್ಲ ಬಂದ್ರು ಬಂದ್ ಆಗ್ಬೇಕು.

ಆನೇಕಲ್​​ : ಬಂದಿಖಾನೆ ಡಿಜಿಪಿಯಾಗಿ ನೇಮಕದ ಬಳಿಕ ಮೊದಲ ಬಾರಿ ಪರಪ್ಪನಅಗ್ರಹಾರ ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ. ಜೈಲಿನ ಚೆಕ್ ಪೋಸ್ಟ್ ಬಳಿ ಸಿಬ್ಬಂದಿಯಿಂದ ಮಾಹಿತಿ ಪಡೆದ ಡಿಜಿಪಿ, ಅಧಿಕಾರಿಗಳ ಜೊತೆ ಸೆಂಟ್ರಲ್ ಜೈಲಿನ ಸುತ್ತಮುತ್ತ ಓಡಾಡಿ ಪರಿಶೀಲನೆ ನಡೆಸಿದ್ದಾರೆ. ಪ್ರತಿ ಬ್ಯಾರಕ್​​ಗೂ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

‘ಎಲ್ಲ ಬಂದ್​​ ಆಗ್ಬೇಕು’

ಜೈಲಿನ ಪ್ರತಿ ಬ್ಯಾರಕ್ ವಿಸಿಟ್ ಮಾಡಿರುವ ಅಲೋಕ್ ಕುಮಾರ್, ಕೈದಿಗಳ ಬಳಿಯು ಮಾಹಿತಿ ಕಲೆ ಹಾಕಿದ್ದಾರೆ. ಊಟ, ತಿಂಡಿ, ಶೌಚಾಲಯ ವ್ಯವಸ್ಥೆ ಬಗ್ಗೆ ಕೈದಿಗಳಿಗೆ ಡಿಜಿಪಿ ಪ್ರಶ್ನೆ ಕೇಳಿದ್ದು, ಮೊಬೈಲ್ ಬಳಕೆ ಮಾಡುತ್ತಿದ್ರೆ ಸಿಬ್ಬಂದಿ ವಶಕ್ಕೆ ನೀಡುವಂತೆ ತಾಕೀತು ಕೂಡ ಮಾಡಿದ್ದಾರೆ. ಕಳ್ಳಾಟ ಆಡಿದ್ರೆ ಕಠಿಣ ಕ್ರಮ ಎದುರಿಸಲು ಸಜ್ಜಾಗಿ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. ಗಾಂಜಾ, ಬಿಡಿ ಸಿಗರೇಟ್ ಇನ್ಮೇಲೆ ಸಿಗಲ್ಲ. ಎಲ್ಲಾ ಬಂದ್ ಆಗಬೇಕು ಎಂದು ಅಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಿಂಚಿನ ಸಂಚಾರ ನಡೆಸಿರುವ ಡಿಜಿಪಿ ಅಡುಗೆ ಮನೆ, ಆಸ್ಪತ್ರೆಗೂ ವಿಸಿಟ್ ಮಾಡಿದ್ದಾರೆ. ವೈದ್ಯರು ಚಿಕಿತ್ಸೆ ಮಾತ್ರ ಕೋಡಬೇಕು. ಅದನ್ನು ಬಿಟ್ಟು ಮೊಬೈಲ್, ಗಾಂಜಾ ಸಾಗಾಣೆ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ನೇರವಾಗಿ ಹೇಳಿದ್ದಾರೆ. ಅಡುಗೆ ಮನೆಯ ಸಿಬ್ಬಂದಿಗೂ ಎಚ್ಚರಿಸಿರುವ ಅವರು, ಎಡಿಷನಲ್​​ ಆ್ಯಕ್ಟಿವಿಟಿಗಳು ಬಂದ್​​ ಆಗಬೇಕು ಎಂದಿದ್ದಾರೆ. ಜೈಲಿನ ಬೇಕರಿಗೂ ಡಿಜಿಪಿ ಭೇಟಿ ನೀಡಿದ್ದು, ಯೀಸ್ಟ್ನಿಂದ ವೈನ್ ತಯಾರಿಸಿದ್ರೆ ವೈಲೆಂಟ್ ಆಗಬೇಕಾಗುತ್ತೆ ಎಂದು ಗರಂ ಆದ ಪ್ರಸಂಗ ಕೂಡ ನಡೆದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *