ಧರ್ಮಸ್ಥಳ ಬುರುಡೆ ಕೇಸ್: ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ.

ಧರ್ಮಸ್ಥಳ ಬುರುಡೆ ಕೇಸ್: ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ.

23 ದಿನಗಳ ನಂತರ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ.

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪಾತ್ರಧಾರಿ ಮಾಸ್ಕ್​ ಮ್ಯಾನ್ ಚಿನ್ನಯ್ಯಗೆ ಕೊನೆಗೂ ಜೈಲಿನಿಂದ ಬಿಡುಗಡೆ ಭಾಗ್ಯ ಒದಗಿಬಂದಿದೆ. ಜಾಮೀನು ಸಿಕ್ಕಿದ್ದರೂ ಸಹ ಶ್ಯೂರಿಟಿ ಇಲ್ಲದೇ ಶಿವಮೊಗ್ಗದ ಜೈಲಿನಲ್ಲಿ ಚಿನ್ನಯಯ್ಯ ಮಂಕಾಗಿದ್ದು, ಸಹ ಕೈದಿಗಳೊಂದಿಗೆ ಹೆಚ್ಚು ಮಾತನಾಡದೆ ಮೌನಕ್ಕೆ ಶರಣಾಗಿದ್ದ. ಆದ್ರೆ, ಇದೀಗ ಒಂದು ಲಕ್ಷ ಬಾಂಡ್, ಇಬ್ಬರು ಜಾಮೀನುದಾರರಿಂದ ಬೆಳ್ತಂಗಡಿ ಕೋರ್ಟ್​​​​​​​ಗೆ ಶ್ಯೂರಿಟಿ ನೀಡಲಾಗಿದೆ. ಇದರಿಂದ ಆರೋಪಿ ಬುರುಡೆ ಚಿನ್ನಯ್ಯ ಬಿಡುಗಡೆಗೆ ನ್ಯಾಯಾಧೀಶರು ಅಸ್ತು ಎಂದಿದ್ದಾರೆ. ಹೀಗಾಗಿ ಚಿನ್ನಯ್ಯನಿಗೆ ಜಾಮೀನು ಸಿಕ್ಕು 23 ದಿನಗಳ ಬಳಿಕ ಬಂಧನದಿಂದ ಮುಕ್ಸಿ ಸಿಕ್ಕಿದ್ದು, ಆಚೆ ಬಂದ ಬಳಿಕ ಈ ಪ್ರಕರಣದ ಬಗ್ಗೆ ಏನಾದರೂ ಸ್ಫೋಟಕ ಅಂಶವನ್ನು ಬಿಚ್ಚಿಡುತ್ತಾನೆಯೇ ಎಂಬ ಕುತೂಹಲವೂ ಸಹ ಇದೆ.

ಇಂದು (ಡಿಸೆಂಬರ್ 17) ಚಿನ್ನಯ್ಯ ಪತ್ನಿ ಮಲ್ಲಿಕಾ ಒಂದು ಲಕ್ಷ ಬಾಂಡ್ ಕೊಟ್ಟಿದ್ದು, ಜೊತೆಗೆ ಇಬ್ಬರು ಜಾಮೀನುದಾರರು ಮತ್ತು ಒಬ್ಬರ ಶ್ಯೂರಿಟಿ ಕೊಡಿಸಿದ್ದಾರೆ. ಬಳಿಕ ಕೋರ್ಟ್​, ಡಿಸೆಂಬರ್ 17 ರಂದು ಚಿನ್ನಯ್ಯನ ಬಿಡುಗಡೆಗೆ ಆದೇಶ ಹೊರಡಿಸಿದೆ. ಸದ್ಯ ಕೋರ್ಟಿನ ಆದೇಶ ಹಿಡಿದು ಮಲ್ಲಿಕಾ ಮತ್ತು ಸಹೋದರಿ ರತ್ನ ಶಿವಮೊಗ್ಗ ಜೈಲಿನತ್ತ ಪ್ರಯಾಣ ಬೆಳೆಸಿದ್ದು, ಇಂದು ಸಂಜೆ ವೇಳೆಗೆ ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಾಲ್ಕು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ ನವೆಂಬರ್ 24ರಂದು ಜಾಮೀನು ಸಿಕ್ಕಿತ್ತು. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಆದ್ರೆ, ಜಾಮೀನು ಸಿಕ್ಕಿದರೂ ಚಿನ್ನಯ್ಯನಿಗೆ ಶ್ಯೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *