ರಾಜ್ಯದಾದ್ಯಂತ ಚಳಿ ಹೆಚ್ಚಳ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ರಾಜ್ಯದಾದ್ಯಂತ ಚಳಿ ಹೆಚ್ಚಳ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ.

ಬೆಂಗಳೂರು : ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಶೀತದ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಚಳಿಯೋ ಚಳಿ

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ಗಡ ನಡುಗಿಸುತ್ತಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 26°C ಇರಲಿದೆ ಎಂದು ಇಲಾಖೆ ತಿಳಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *