ಗರ್ಭಿಣಿ ಮಗಳ ಹ* ಪ್ರಕರಣಕ್ಕೆ ಬೆಚ್ಚಿಬೀಳಿಸುವ ಟ್ವಿಸ್ಟ್.?

ಗರ್ಭಿಣಿ ಮಗಳ ಹ* ಪ್ರಕರಣಕ್ಕೆ ಬೆಚ್ಚಿಬೀಳಿಸುವ ಟ್ವಿಸ್ಟ್.

ಮಗಳ ಹ* ಪ್ರಕರಣಕ್ಕೆ ಹಂತಕನ ಪ್ಲಾನ್ ಏನಿತ್ತು ಗೊತ್ತಾದ್ರೆ ಬೆಚ್ಚಿಬೀಳ್ತೀರಿ!

ಹುಬ್ಬಳ್ಳಿ : ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಗಳನ್ನು ತಂದೆಯೇ ಹತ್ಯೆ ಮಾಡಿರುವ ಘಟನೆಗೆ ರೋಚಕ ಟ್ವಿಸ್ಟ್ ದೊರೆತಿದೆ. ಮರ್ಯಾದಾ ಹತ್ಯೆಗೂ ಮುನ್ನ ಅಳಿ ವಿವೇಕಾನಂದನ ಇಡೀ ಕುಟುಂಬವನ್ನೇ ನಾಶ ಮಾಡಲು ತಂದೆ ಪ್ರಕಾಶ್ ಗೌಡ ಸಂಚು ರೂಪಿಸಿದ್ದ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ದಲಿತ ಯುವಕ ವಿವೇಕಾನಂದನನ್ನು ಮದುವೆಯಾಗಿದ್ದಕ್ಕೆ 20 ವರ್ಷ ವಯಸ್ಸಿನ ಮಾನ್ಯಾ ಪಾಟೀಲ್ ಅವರನ್ನು ಅವರ ತಂದೆ ಪ್ರಕಾಶ್ ಗೌಡ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಆದರೆ, ಕೇವಲ ಮಗಳ ಹತ್ಯೆ ಮಾತ್ರವಲ್ಲ, ಅಳಿಯ ವಿವೇಕಾನಂದನ ತಂದೆ ಮತ್ತು ವಿವೇಕಾನಂದನನ್ನೂ ಕೊಲ್ಲಲು ಪ್ರಕಾಶ್ ಗೌಡ ಮಾಸ್ಟರ್ ಪ್ಲಾನ್ ಮಾಡಿದ್ದ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ಈ ಎರಡು ಕೊಲೆ ಯತ್ನಗಳು ವಿಫಲವಾದ ನಂತರ ಆತ ಮಗಳನ್ನೇ ಕೊಂದಿದ್ದಾನೆ. ಈ ಕೃತ್ಯದಲ್ಲಿ ಕೆಲವು ಗ್ರಾಮಸ್ಥರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *