ಬಳ್ಳಾರಿ ಬ್ಯಾನರ್ ಗಲಾಟೆಗೆ ಹೊಸ ಟ್ವಿಸ್ಟ್.

ಬಳ್ಳಾರಿ ಬ್ಯಾನರ್ ಗಲಾಟೆಗೆ ಹೊಸ ಟ್ವಿಸ್ಟ್.

ಭರತ್ ರೆಡ್ಡಿ ಬೆಂಬಲಿಗರಿಂದ ಜನಾರ್ದನ ರೆಡ್ಡಿ ವಿರುದ್ಧ ಸ್ಫೋಟಕ ಸಾಕ್ಷಿ.

ಬಳ್ಳಾರಿ : ಬ್ಯಾನರ್​​ ವಿಚಾರವಾಗಿ ನಡೆದ ಗಲಾಟೆ ವೇಳೆ ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣಕ್ಕೆ ದಿನಕ್ಕೊಂದು ಹೊಸ ಟ್ವಿಸ್ಟ್​​ ಸಿಗುತ್ತಿದೆ. ಗಲಭೆ ವೇಳೆ ಜನಾರ್ದನ ರೆಡ್ಡಿ ಮನೆ ಮೇಲೆ ಗನ್‌ಮ್ಯಾನ್‌ ನಿಂತಿರೋದು ಎನ್ನಲಾದ ಫೋಟೋವೊಂದನ್ನು ಶಾಸಕ ಭರತ್ ರೆಡ್ಡಿ ಬೆಂಬಲಿಗರು ರಿಲೀಸ್​​ ಮಾಡಿದ್ದಾರೆ. ಜನಾರ್ದನ ರೆಡ್ಡಿ ಕಡೆಯವರಿಂದಲೂ ಫೈರಿಂಗ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸರ್ಕಾರಿ ಗನ್‌ಮ್ಯಾನ್ ವಿಚಾರಣೆಗೆ ಕಾಂಗ್ರೆಸ್ ಒತ್ತಾಯ ಮಾಡಿದೆ. ಹೀಗಾಗಿ ಈಗ ಬಿಡುಗಡೆ ಮಾಡಲಾಗಿರುವ ಫೋಟೋ ಬಗ್ಗೆಯೂ ಬಳ್ಳಾರಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಇನ್ನು ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ರೆಡ್ಡಿ ಹಾಗೂ ಬೆಂಬಲಿಗ ನಾಗರಾಜ್ ನೀಡಿದ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ಯತ್ನ ಎಂದು ಆರೋಪಿಸಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಕೇಸ್ ದಾಖಲಿಸಿದ್ದರೆ, ಅವರ ಆಪ್ತ ನಾಗರಾಜ್ ಅಟ್ರಾಸಿಟಿ ಪ್ರಕರಣ ದಾಖಲಿಸಿದ್ದರು. ಹೀಗಾಗಿ ಬ್ಯಾನರ್ ಹರಿದ ಸ್ಥಳ, ಜನಾರ್ದನ ರೆಡ್ಡಿ ತೋರಿಸಿದ ಜಾಗಗಳನ್ನು ಬಾಂಬ್ ನಿಷ್ಕ್ರಿಯ ದಳ ಮತ್ತು ಎಫ್​ಎಸ್​ಎಲ್​ ತಂಡ ಪರಿಶೀಲನೆ ನಡೆಸಿದೆ. ಜನಾರ್ದನ ರೆಡ್ಡಿ ದೂರಿನ ಕೇಸ್​​ ತನಿಖಾಧಿಕಾರಿ ಅಯ್ಯನಗೌಡ ಮತ್ತು ಅಟ್ರಾಸಿಟಿ ಕೇಸ್ ತನಿಖಾಧಿಕಾರಿ ಬಸವರಾಜ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಜನಾರ್ದನ ಮನೆ ಸಿಸಿಕ್ಯಾಮರ ದೃಶ್ಯಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಶಾಸಕ ಜನಾರ್ದನ ರೆಡ್ಡಿ ತೋರಿಸಿದ್ದ ಬುಲೆಟ್ ಕೂಡ ಜಪ್ತಿ ಮಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *