ವೈರಲ್ ವಿಡಿಯೋ ಕಾರಣ ವೈದ್ಯ ಆತ್ಮಹ*!

ವೈರಲ್ ವಿಡಿಯೋ ಕಾರಣ ವೈದ್ಯ ಆತ್ಮಹ*!

ರಾಜೀವ್ ಪಿಕಳೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.

ಕಾರವಾರ: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ರಾಜೀವ್​ ಪಿಕಳೆ ಆತ್ಮಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ತನ್ನ ತೇಜೋವಧೆಯಾದ ಕಾರಣ ಪಿಕಳೆ, ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಸಾವಿಗೆ ಶರಣಾಗಿದ್ದರು. ಇದೀಗ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಅವಧಿ ಮೀರಿದ ಮಾತ್ರೆ ನೀಡಿದ್ದ ವೈದ್ಯ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಪಿಕಳೆ ಕುಟುಂಬದ ಹಿರಿಯ ರಾಜೀವ್ ಪಿಕಳೆ ಸಾವನ್ನಪ್ಪಿದ್ದರು. ಆರ್ಥಿಕವಾಗಿ ಗಟ್ಟಿಯಾಗಿಯೇ ಇದ್ದ ಪಿಕಳೆ, ಒಂಟಿಯಾಗಿ ವಾಸಿಸುತ್ತಿದ್ದರು. ಪಿಕಳೆ ಕುಟುಂಬ ಕಾರವಾರದಲ್ಲಿ ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿದೆ. ಕೆಲ ದಿನಗಳ ಹಿಂದೆ ರಾಜೀವ್​ ಪಿಕಳೆ ರೋಗಿಗೆ ಅವಧಿ ಮುಗಿದಿರುವ ಮಾತ್ರೆ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರಿಂದ ಮನನೊಂದ ಪಿಕಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭಾಷ್, ಹರಿಶ್ಚಂದ್ರ ಎನ್ನುವವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿರುವ ಇವರನ್ನು​ ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.

ಜಾಲತಾಣದಲ್ಲಿ ವೀಡಿಯೋ ವೈರಲ್ ಆದ ನಂತರ ಮನನೊಂದಿದ್ದ ರಾಜೀವ್ ಪಿಕಳೆ ಸಾಕಷ್ಟು ನೊಂದಿದ್ದರು. ಇದಲ್ಲದೇ ಅವಧಿ ಮುಗಿದ ಔಷಧ ನೀಡಿದ್ದಕ್ಕೆ ತನ್ನಿಂದ ತಪ್ಪಾಗಿದೆ ಎಂದು ಕ್ಷಮೆಯೂ ಕೇಳಿದ್ದರು. ಆದರೆ ವಿಡಿಯೋ ಹೆಚ್ಚು ವೈರಲ್ ಆಗಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದ ಅವರು, ಡೆತ್ ನೋಟ್​ನಲ್ಲಿ ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದು ಡಬಲ್ ಬ್ಯಾರಲ್​​ ಗನ್​ನಿಂದ ಶೂಟ್​​ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *