CCTV ಕಣ್ತಪ್ಪಿಸಿ ದರ್ಶನ್ ಭೇಟಿ.

CCTV ಕಣ್ತಪ್ಪಿಸಿ ದರ್ಶನ್ ಭೇಟಿ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪೊಲೀಸ್ ಪೇದೆ–ವಾರ್ಡನ್ ಕರ್ತವ್ಯಲೋಪ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್  ಅವರನ್ನು ನೋಡುವ ಹಂಬಲ ಇದೀಗ ಪೊಲೀಸರಿಗೇ ಮುಳುವಾಗಿದೆ. ನಿಯಮ ಮೀರಿ ದರ್ಶನ್ ನನ್ನು ನೋಡಲು ಹೋದ ಯಲಹಂಕ ಠಾಣೆ ಪೊಲೀಸ್ ಕಾನ್​ಸ್ಟೇಬಲ್ ಹಾಗೂ ಅವರಿಗೆ ಸಾಥ್ ನೀಡಿದ್ದ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಪೊಲೀಸ್ ಪೇದೆಯೊಬ್ಬರಿಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಜೈಲು ವಾರ್ಡನ್ ನನ್ನು ವರ್ಗಾವಣೆ ಮಾಡಲಾಗಿದೆ. ಡಿಜಿಪಿ ಅಲೋಕ್ ಕುಮಾರ್ ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಈ ಕರ್ತವ್ಯಲೋಪ ಬೆಳಕಿಗೆ ಬಂದಿದೆ. ಕೂಡಲೇ ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್ ಪ್ರಭುಶಂಕರ ಚೌಹಾಣ್​ ಎನ್ನುವರನ್ನು ಚಾಮರಾಜನಗರ ಕಾರಾಗೃಹಕ್ಕೆ ಎತ್ತಂಗಡಿ ಮಾಡಿದ್ದಾರೆ. ಅಲ್ಲದೇ ಇಲಾಖೆ ತನಿಖೆಗೆ ಸೂಚಿಸಿದ್ದಾರೆ.

ನಡೆದಿದ್ದೇನು?

ಳೆದ ಜನವರಿ 24 ರಂದು ಯಲಹಂಕ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಒಬ್ಬರು ಬೇರೊಂದು ಪ್ರಕರಣದ ಆರೋಪಿಗಳನ್ನು ಜೈಲಿಗೆ ಬಿಡಲು ಪರಪ್ಪನ ಅಗ್ರಹಾರಕ್ಕೆ ಬಂದಿದ್ದರು. ಈ ವೇಳೆ ಜೈಲಿನಲ್ಲಿ ಕೆಲಸ ಮಾಡುತ್ತಿದ್ದ ವಾರ್ಡರ್ ಪ್ರಭಾಕರ್ ಚೌಹಾನ್ ಬಳಿ, ನನಗೆ ನಟ ದರ್ಶನ್ ಅವರನ್ನು ನೋಡಬೇಕು ತೋರಿಸಿ ಪ್ಲೀಸ್ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪಿದ ಪ್ರಭಾಕರ್, ಸಿಸಿಟಿವಿ ಕ್ಯಾಮರಾಗಳ ಕಣ್ಣು ತಪ್ಪಿಸಿ ರಹಸ್ಯವಾಗಿ ಪೇದೆಯನ್ನು ದರ್ಶನ್ ಇದ್ದ ಬ್ಯಾರಕ್‌ ಬಳಿ ಕರೆದೊಯ್ದಿದ್ದರು.

ಜೈಲು ಸಿಬ್ಬಂದಿ ಎತ್ತಂಗಡಿ!

ಪ್ರಕರಣವೊಂದರ ಆರೋಪಿಯನ್ನು ಜೈಲಿಗೆ ಬಿಡಲು ಯಲಹಂಕ ಕಾನ್ಸ್​​ಟೇಬಲ್ ಗಣೇಶ್ ಎಂಬುವವರು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದು, ಈ ವೇಳೆ ಈ ವೇಳೆ ನಟ ದರ್ಶನ್ ನನ್ನು ತೋರಿಸುವಂತೆ ಮನವಿ ಮಾಡಿದ್ದಾರೆ. ಬಳಿಕ ವಾರ್ಡನ್​ ಪ್ರಭುಶಂಕರ ಚೌಹಾಣ್​, ಸಿಸಿ ಕ್ಯಾಮರಾ ಕಣ್ತಪ್ಪಿಸಿ ಪೇದೆಯನ್ನು ದರ್ಶನ್​ ಇರುವ ಬ್ಯಾರಕ್​​​ಗೆ ಬಳಿ ಕರೆದುಕೊಂಡು ಹೋಗಿದ್ದಾರೆ.ಈ ವಿಚಾರ ತಿಳಿದ ಡಿಜಿಪಿ ಅಲೋಕ್ ಕುಮಾರ್, ವಾರ್ಡನ್​​ ಪ್ರಭುಶಂಕರ ಚೌಹಾಣ್ ಅವರನ್ನು ಪರಪ್ಪನ ಅಗ್ರಹಾರ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *