ಚಿಕ್ಕಬಳ್ಳಾಪುರದಲ್ಲಿ GSI ವೈಮಾನಿಕ ಸಮೀಕ್ಷೆ, ಬಂಗಾರದ ಸುಳಿವು?
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿನ್ನ ಹಾಗೂ ನಿಧಿ ನಿಕ್ಷೇಪಗಳ ಶೋಧ ಕಾರ್ಯ ತೀವ್ರಗೊಂಡಿದೆ. ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದೆ. ಕೆಜಿಎಫ್ ಗೋಲ್ಡ್ ಮೈನಿಂಗ್ ಬೆಟ್ಟದ ಸಾಲಿನಲ್ಲಿ ಇರುವ ಈ ಪ್ರದೇಶದಲ್ಲಿ ತಜ್ಞರು ಚಿನ್ನದ ಲಭ್ಯತೆಯನ್ನು ಪತ್ತೆಹಚ್ಚಲು ಶೋಧ ನಡೆಸುತ್ತಿದ್ದಾರೆ. ಈ ಹಿಂದೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ಮಣ್ಣಿನಲ್ಲಿ ಚಿನ್ನದ ಕಣಗಳು ಪತ್ತೆಯಾಗಿದ್ದವು. ನಿರ್ದಿಷ್ಟವಾಗಿ ಹೇಳುವುದಾದರೆ, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನ ರೈತರ ಜಮೀನುಗಳಲ್ಲಿ ಬಂಗಾರದ ಕಣಗಳು ಸಿಕ್ಕಿರುವುದು ದೃಢಪಟ್ಟಿತ್ತು.
ಹೆಲಿಕಾಪ್ಟರ್ ಬಳಸಿ ನಡೆಸುತ್ತಿರುವ ಈ ವೈಮಾನಿಕ ಸರ್ವೇ ಕಾರ್ಯವು ಪ್ರದೇಶದಲ್ಲಿ ಅಡಗಿರುವ ಚಿನ್ನ ಮತ್ತು ಇತರ ನಿಧಿ ನಿಕ್ಷೇಪಗಳ ಬಗ್ಗೆ ನಿಖರವಾದ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿಯಾಗಲಿದೆ. ಈ ಸಮೀಕ್ಷೆಯ ಫಲಿತಾಂಶಗಳು ಭವಿಷ್ಯದ ಗಣಿಗಾರಿಕೆ ಚಟುವಟಿಕೆಗಳಿಗೆ ಪ್ರಮುಖ ಮಾರ್ಗದರ್ಶನ ನೀಡುವ ನಿರೀಕ್ಷೆಯಿದೆ. ಈ ಮೂಲಕ ಈ ಐತಿಹಾಸಿಕ ಚಿನ್ನದ ಗಣಿಗಾರಿಕೆ ಪ್ರದೇಶದಲ್ಲಿ ಹೊಸ ಚಿನ್ನದ ನಿಕ್ಷೇಪಗಳು ಪತ್ತೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
For More Updates Join our WhatsApp Group :




