ಟ್ರಾಫಿಕ್ ಪೊಲೀಸ್ ಪ್ರಾಣ ರಕ್ಷಣೆ: ಹೃದಯಾಘಾತಕ್ಕೆ ಸಿಪಿಆರ್ ನೀಡಿ ಜೀವ ಉಳಿಸಿದ ಘಟನೆ.
ಹೈದರಾಬಾದ್ : ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್ನ ಸಿಕಂದರಾಬಾದಿನಲ್ಲಿ ನಡೆದಿದೆ.
ಸಂಗೀತ್ ಕ್ರಾಸ್ರೋಡ್ಸ್ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ.
For More Updates Join our WhatsApp Group :



