ಟೆಹ್ರಾನ್ ವಿಮಾನ ನಿಲ್ದಾಣದಲ್ಲಿ ಇರಾನ್ ನಾಯಕರ ವಿಮಾನ ಧ್ವಂಸ: ಇಸ್ರೇಲ್ ಹೇಳಿಕೆ

ಟೆಹ್ರಾನ್ ವಿಮಾನ ನಿಲ್ದಾಣದಲ್ಲಿ ಇರಾನ್ ನಾಯಕರ ವಿಮಾನ ಧ್ವಂಸ: ಇಸ್ರೇಲ್ ಹೇಳಿಕೆ

ವಾಯು ದಾಳಿಯಲ್ಲಿ ಖಮೇನಿ ಬಳಸುತ್ತಿದ್ದ ವಿಮಾನ ನಾಶ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಳ

ಜೆರುಸಲೇಂ : ಇಸ್ರೇಲ್ ತನ್ನ ವಾಯುಪಡೆಯು ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ವಿಮಾನವನ್ನು ರಾತ್ರೋರಾತ್ರಿ ಹೊಡೆದು ನಾಶಪಡಿಸಿರುವುದಾಗಿ ಘೋಷಿಸಿದೆ. ಈ ದಾಳಿಯು ಇರಾನ್‌ನ ಪ್ರಾದೇಶಿಕ ಸಮನ್ವಯಗಳಿಗೆ ದೊಡ್ಡ ಹೊಡೆತ ನೀಡಿದೆ ಎಂದು ಹೇಳಿದೆ.

ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣದ ಮೂಲಕ ಮಿತ್ರರಾಷ್ಟ್ರಗಳ ಜೊತೆ ಸಂಪರ್ಕ ಸಾಧಿಸಲು, ಮಿಲಿಟರಿ ಸಂಗ್ರಹಣೆಯನ್ನು ಸುಗಮಗೊಳಿಸಲು ಮತ್ತು ಸಂಬಂಧಗಳನ್ನು ನಿರ್ವಹಿಸಲು ಖಮೇನಿ ಮತ್ತು ಇರಾನಿನ ಇತರ ಹಿರಿಯ ಅಧಿಕಾರಿಗಳು ಈ ವಿಮಾನವನ್ನು ಬಳಸುತ್ತಿದ್ದರು ಎಂದು ಇಸ್ರೇಲ್ ರಕ್ಷಣಾ ಪಡೆಗಳು ತಿಳಿಸಿವೆ.

ಫೆಬ್ರವರಿ 28ರಂದು ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ 86 ವರ್ಷದ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ನಂತರ ಪ್ರಾದೇಶಿಕ ಸಂಘರ್ಷ ತೀವ್ರಗೊಂಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಹಲವಾರು ಗಲ್ಫ್ ರಾಷ್ಟ್ರಗಳಲ್ಲಿ ಇಸ್ರೇಲಿ ಮತ್ತು ಯುಎಸ್ ಗುರಿಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿತು. ಇದಾದ ನಂತರ ಇರಾನ್ ಪ್ರಮುಖ ಜಾಗತಿಕ ಇಂಧನ ಕಾರಿಡಾರ್ ಆದ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿತು. ಇದು ಅಂತಾರಾಷ್ಟ್ರೀಯ ತೈಲ ಸರಬರಾಜು, ಇಂಧನ ಮಾರುಕಟ್ಟೆಗಳು ಮತ್ತು ಜಾಗತಿಕ ಆರ್ಥಿಕ ಸ್ಥಿರತೆಯ ಮೇಲೆ ದೊಡ್ಡ ಪರಿಣಾಮ ಬೀರಿದೆ. ಹಾರ್ಮುಜ್ ಜಲಸಂಧಿ ವಿಶ್ವದ ಐದನೇ ಒಂದು ಭಾಗದಷ್ಟು ತೈಲವನ್ನು ಸಾಗಿಸುವ ನಿರ್ಣಾಯಕ ಸಮುದ್ರ ಮಾರ್ಗವಾಗಿದೆ. ಹಾರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ನಿರ್ಣಾಯಕ ಹಡಗು ಮಾರ್ಗಗಳಲ್ಲಿ ಒಂದಾಗಿದೆ. ಹೀಗಾಗಿ, ಭಾರತ ಸೇರಿದಂತೆ ಹಲವು ದೇಶಗಳು ಇಂಧನದ ಪೂರೈಕೆಯ ಸಮಸ್ಯೆಯನ್ನು ಎದುರಿಸುತ್ತಿವೆ. ಸದ್ಯಕ್ಕೆ ಇರಾನ್ ಭಾರತದ ಹಡಗುಗಳು ಈ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಹಾಗೂ ಗ್ಯಾಸ್​ ಸಾಗಾಟ ಮಾಡಲು ಒಪ್ಪಿಗೆ ನೀಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *