ದರ್ಶನ್ ಪರ ವಕೀಲರಿಂದ ಸೆನ್ಸಾರ್ ಮಂಡಳಿಗೆ ನೋಟಿಸ್.
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಲ್ಲಿ ಎ2 ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದ ವಿವರ ಎಲ್ಲರಿಗೂ ತಿಳಿದಿದೆ. ಚಾರ್ಜ್ಶೀಟ್ನಲ್ಲಿ ಎಲ್ಲ ವಿಷಯವನ್ನೂ ವಿವರವಾಗಿ ಬರೆಯಲಾಗಿದೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಸೆಟ್ಟೇರಿ, ರಿಲೀಸ್ಗೆ ರೆಡಿ ಆಗಿದೆ. ಈ ಸಿನಿಮಾ ಟೀಸರ್ ನೋಡಿದರೆ ಇದು ದರ್ಶನ್ ಪ್ರಕರಣವನ್ನೇ ನೆನಪಿಸಿದೆ. ಇದು ಚರ್ಚೆಗೆ ಕಾರಣ ಆಗಿತ್ತು. ಹೀಗಿರುವಾಗಲೇ ದರ್ಶನ್ ಪರ ವಕೀಲರು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದು, ಸಿನಿಮಾಗೆ ಸೆನ್ಸಾರ್ ಮಾಡದಂತೆ ಕೋರಿದೆ.
ರೇಣಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತಂದು ಬೆಂಗಳೂರಿನ ಪಟ್ಟಣಗೆರೆ ಶೆಡ್ ಅಲ್ಲಿ ಕೊಲೆ ಮಾಡಲಾಯಿತು. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಕೂಡ ಸ್ಥಳದಲ್ಲಿ ಇದ್ದರು ಎನ್ನುವ ಆರೋಪ ಇದೆ. ಆ ಬಳಿಕ ಹೆಣವನ್ನು ಮೋರಿ ಪಕ್ಕದಲ್ಲಿ ಹಾಕಲಾಯಿತು. ಹೆಣ ಬಿಸಾಕಿದವರು ಸಿಕ್ಕಿ ಬಿದ್ದರು. ನಂತರ ದರ್ಶನ್ ಹೆಸರು ಕೂಡ ಹೊರಬಿತ್ತು. ಅವರನ್ನು ಬಂಧಿಸಲಾಯಿತು. ತಾವು ನಿರಪರಾಧಿ ಎಂದು ಅವರು ಹೇಳುತ್ತಾ ಬರುತ್ತಿದ್ದಾರೆ.
ಈ ಪ್ರಕರಣ ಇನ್ನೂ ಕೋರ್ಟ್ನಲ್ಲಿದೆ. ದರ್ಶನ್ ತಪ್ಪು ಮಾಡಿದ್ದಾನೆ ಅಥವಾ ಮಾಡಿಲ್ಲ ಎಂಬುದನ್ನು ಕೋರ್ಟ್ ನಿರ್ಧರಿಸುತ್ತದೆ. ಅದಕ್ಕೂ ಮೊದಲೇ ಈ ಘಟನೆ ಆಧರಿಸಿ ಸಿನಿಮಾ ಮಾಡೋದು ಎಷ್ಟು ಸರಿ ಎಂಬ ಪ್ರಶ್ನೆ ಕೆಲವರದ್ದು. ಈಗ ದರ್ಶನ್ ಪರ ವಕೀಲರು ಸೆನ್ಸರ್ ಮಂಡಳಿಗೆ ನೋಟೀಸ್ ನೀಡಿ, ಯಾವುದೇ ಕಾರಣಕ್ಕೂ ಸಿನಿಮಾಗೆ ಸೆನ್ಸಾರ್ ಮಾಡಬಾರದು ಎಂದು ಹೇಳಿದ್ದಾರೆ. ನಿರ್ದೇಶಕ ಲವ ಆ್ಯಕ್ಷನ್ ಕಟ್ ಹೇಳಿದ್ದು, ತನುಷ್ ಶಿವಣ್ಣ ನಾಯಕನಾಗಿ ಸಿನಿಮಾದಲ್ಲ ನಟಿಸಿದ್ದಾರೆ.
For More Updates Join our WhatsApp Group :




