ಬಸ್ ಕಳ್ಳತನ! ಸೈದಾಪುರದಲ್ಲಿ ಅಚ್ಚರಿ ಘಟನೆ.

ಬಸ್ ಕಳ್ಳತನ! ಸೈದಾಪುರದಲ್ಲಿ ಅಚ್ಚರಿ ಘಟನೆ.

ಯಾದಗಿರಿಯಲ್ಲಿ ಚಾಲಕ ಊರಿಗೆ ಹೋಗಲು ಬಸ್ ಕದ್ದೊಯ್ದ ಚಾಲಕ

ಯಾದಗಿರಿ : ಊರಿಗೆ ಹೋಗಲು ವಾಹನ ಸಿಗದಿದ್ದ ಕಾರಣ ಚಾಲಕನೊಬ್ಬ ಬಸ್ಸನ್ನೇ ಕದ್ದೊಯ್ದ ವಿಲಕ್ಷಣ ಘಟನೆಗೆ ಯಾದಗಿರಿ ಜಿಲ್ಲೆ ಸಾಕ್ಷಿಯಾಗಿದೆ. ಯಾದಗಿರಿಯ ಸೈದಾಪುರ ಪಟ್ಟಣದಿಂದ ಬಸ್ ಕದ್ದೊಯ್ಯಲಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಇದೀಗ ಬಯಲಾಗಿವೆ. ಕೆಕೆಆರ್​ಟಿಸಿಗೆ ಸೇರಿದ ಬಸ್‌ ಅನ್ನು ಅದೇ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರಾಗಿದ್ದ ಮಹಿಪಾಲರೆಡ್ಡಿ ಕದ್ದೊಯ್ದಿದ್ದಾರೆ. ಕರ್ತವ್ಯ ಲೋಪದ ಹಿನ್ನೆಲೆ ಮಹಿಪಾಲರೆಡ್ಡಿಯನ್ನು ವಜಾಗೊಳಿಸಲಾಗಿತ್ತು.

ಮಾರ್ಚ್ 19ರಂದು ಸೈದಾಪುರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ ಅನ್ನು ಮಹಿಪಾಲರೆಡ್ಡಿ ತೆಗೆದುಕೊಂಡು ಹೋಗಿದ್ದಾರೆ. ಸ್ವಗ್ರಾಮ ರಾಚನಳ್ಳಿಗೆ ತೆರಳಲು ಯಾವುದೇ ವಾಹನ ಸಿಗದಿದ್ದರಿಂದ ಈ ಕೃತ್ಯ ಎಸಗಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಬಸ್ ಕದ್ದೊಯ್ದ ಬಳಿಕ ಗ್ರಾಮದಲ್ಲಿರುವ ದೇವಸ್ಥಾನದ ಬಳಿ ನಿಲ್ಲಿಸಿ, ಅಲ್ಲಿಂದ ತೆರಳಿದ್ದರು. ಬಳಿಕ ಪ್ರಕರಣ ಬೆಳಕಿಗೆ ಬಂದಂತೆ ಪೊಲೀಸರು ತನಿಖೆ ನಡೆಸಿ ಬಸ್‌ ಅನ್ನು ವಾಪಸ್ ಪಡೆದಿದ್ದಾರೆ. ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *